ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಿಢೀರ್ ದಾಳಿ ; 9 ಮಂದಿ ವಶಕ್ಕೆ

Written by Mahesha Hindlemane

Published on:

ರಿಪ್ಪನ್‌ಪೇಟೆ : ಅರಸಾಳು ಗ್ರಾಮದ ಮಾಣಿಕೆರೆ ಸಮೀಪದ ನೀಲಗಿರಿ ತೋಪಿನಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ 9 ಜನರ ತಂಡದ ಮೇಲೆ ರಿಪ್ಪನ್‌ಪೇಟೆ ಪೊಲೀಸರು ದಿಢೀರ್ ದಾಳಿ ನಡೆಸಿ ಜೂಜಾಟದಲ್ಲಿ ತೊಡಗಿದ 9 ಜನರನ್ನು ಮತ್ತು ನಗದು ಹಣ ಹಾಗೂ ಬಳಸುತ್ತಿದ್ದ ಸಾಮಗ್ರಿಗಳನ್ನು ಜಪ್ತಿ ಮಾಡಿ ತಮ್ಮ ವಶಕ್ಕೆ ಪಡೆದಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ನೇತೃತ್ವದ ತಂಡವು ಠಾಣಾ ವ್ಯಾಪ್ತಿಯ ದೂನ ಬೆನವಳ್ಳಿ ಹಾಗೂ ಅರಸಾಳು ಗ್ರಾಮಗಳಲ್ಲಿ ಗಸ್ತು ತಿರುಗುವ ಸಂದರ್ಭದಲ್ಲಿ ಅರಸಾಳು ಗ್ರಾಮದ ಮಾಣಿಕೆರೆ ಬಳಿಯ ಖಾಸಗಿ ಜಮೀನಿನ ಪಕ್ಕದ ನೀಲಗಿರಿ ಪ್ಲಾಂಟೆಷನ್‌ನಲ್ಲಿ ಕೆಲವರು ಹಣ ಪಣಕ್ಕಿಟ್ಟು ಅಕ್ರಮವಾಗಿ ಇಸ್ಪೀಟ್ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿ ಗುಂಪಿನ ಮೇಲೆ ದಾಳಿ ನಡೆಸಿದಾಗ ಜೂಜಾಟದಲ್ಲಿ ತೊಡಗಿದ 9 ಜನ ಅರೋಪಿಗಳನ್ನು ಮತ್ತು 3150 ರೂ. ನಗದು ಹಾಗೂ ಇಸ್ಪೀಟ್ ಕಾರ್ಡ್‌ಗಳನ್ನು ಆಟಕ್ಕೆ ಬಳಸಲಾದ ಪ್ಲಾಸ್ಟಿಕ್ ಟಾರ್ಪಲ್ ಮತ್ತು ಬೆಡ್‌ಶೀಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಪಿಎಸ್ಐ ರಾಜುರೆಡ್ಡಿ, ಪೊಲೀಸ್ ಸಿಬ್ಬಂದಿಗಳಾದ ವಿಶ್ವನಾಥ, ರಾಮಚಂದ್ರ ಹಾಗೂ ಅವಿನಾಶ್ ಪಾಲ್ಗೊಂಡಿದ್ದರು.

Leave a Comment