ಕಾಡು ಹಂದಿ ಬೇಟೆಯಾಡಿ ಮಾಂಸ ಮಾರಾಟ ಮಾಡಲು ಯತ್ನಿಸುತ್ತಿದ್ದವನ ಬಂಧನ

Written by Mahesha Hindlemane

Updated on:

ಶಿಕಾರಿಪುರ : ತಾಲ್ಲೂಕಿನ ಗಾಮ ಗ್ರಾಮದಲ್ಲಿ ಕಾಡು ಹಂದಿಯನ್ನು ಬೇಟೆಯಾಗಿಸಿ, ಮಾಂಸವನ್ನು ಮನೆಯಲ್ಲೇ ತಯಾರಿಸಿ ಮಾರಾಟ ಮಾಡಲು ಸಿದ್ಧತೆ ನಡೆಸುತ್ತಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಗಾಮ ಗ್ರಾಮದ ನಿವಾಸಿ ಕುಮಾರ್ ಬಂಧಿತ ಆರೋಪಿ. ಈತನಿಂದ 27 ಕೆ.ಜಿ. ಕಾಡು ಹಂದಿ ಮಾಂಸ ಮತ್ತು ಕೃತ್ಯಕ್ಕೆ ಬಳಸಲಾಗುತ್ತಿದ್ದ ಕತ್ತಿ, ಮಚ್ಚು, ತಕ್ಕಡಿ ಸೇರಿದಂತೆ ಹಲವು ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಶಿಕಾರಿಪುರ ಉಪವಿಭಾಗದ ಅಂಬ್ಲಿಗೊಳ ವಲಯದ ಅರಣ್ಯಾಧಿಕಾರಿ ಶಾಂತಪ್ಪ ಪೂಜಾರ್ ನೇತೃತ್ವದಲ್ಲಿ, ಉಪ ವಲಯದ ಅರಣ್ಯಾಧಿಕಾರಿಗಳಾದ ಅಬ್ದುಲ್ ಕರೀಮ್ ಮತ್ತು ಅಮಿತ್, ಜೊತೆಗೆ ಗಸ್ತು ಅರಣ್ಯ ಪಾಲಕರಾದ ಕೃಷ್ಣಮೂರ್ತಿ, ಸುರೇಶ್, ಚಂದ್ರಪ್ಪ ಲಮಾಣಿ ಸೇರಿದಂತೆ ಅಧಿಕಾರಿಗಳ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ‌.

ಈ ಘಟನೆ ಸಂಬಂಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Leave a Comment