ರಿಪ್ಪನ್ಪೇಟೆ : ಇಲ್ಲಿನ ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಡಿ.ಈ.ಮಧುಸೂದನ್ ಆಯ್ಕೆಯಾಗಿದ್ದಾರೆ.
ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ಈ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮುಂದಿನ ಮೂರು ವರ್ಷದ ಅವಧಿಗೆ ಈ ಕೆಳಕಂಡವರನ್ನು ಪದಾಧಿಕಾರಿಗಳಾಗಿ ನೇಮಿಸಲಾಗಿದೆ.
ರವೀಂದ್ರ ಕೆರೆಹಳ್ಳಿ, ಶ್ರೀಧರ ಜೆ.ಆರ್, ಗಣೇಶರಾವ್ ಕೆರೆಹಳ್ಳಿ, ಹರೀಶ್ ಎಸ್.ಪ್ರಭು,(ಸಾಮಾನ್ಯ), ದೀಪಾ ಎಸ್ ಹೆಬ್ಬಾರ್, ಧನಲಕ್ಷ್ಮಿ (ಮಹಿಳೆಯರು), ಸ್ವಾಮಿ (ಪರಿಶಿಷ್ಟ ಜಾತಿ) ಹಾಗೂ ದೇವಸ್ಥಾನದ ಅರ್ಚಕರಾಗಿ ಶ್ರೀಶಾ ಎಂ.ಎಸ್.ಹೆಗಡೆ ಯವರು ಸೇರಿದಂತೆ 9 ಜನರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಆಯ್ಕೆಯಾಗಿದ್ದಾರೆಂದು ಹೊಸನಗರ ತಹಸೀಲ್ದಾರ್ ಕಛೇರಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





