ಹೊಸನಗರದ ಅಕ್ಷಯ್ ಶಾಂತಾರಾಮ್‌ಗೆ ಪಿಎಚ್‌ಡಿ ಪದವಿ

Written by Mahesha Hindlemane

Published on:

ಹೊಸನಗರ : ಅಮೃತ ವಿಶ್ವವಿದ್ಯಾಪೀಠ ಮೈಸೂರು ಕ್ಯಾಂಪಸ್‌ನ ಕಂಪ್ಯೂಟರ್ ಸೈನ್ಸ್ ವಿಭಾಗದ ಉಪ ಮುಖ್ಯಸ್ಥ ಹಾಗೂ ಸಹ ಪ್ರಾಧ್ಯಾಪಕ ಡಾ. ಅಕ್ಷಯ್ ಶಾಂತಾರಾಮ್ ಪಿಎಚ್‌ಡಿ ಸಂಶೋಧನಾ ಪ್ರಬಂಧಕ್ಕೆ ವಿಶ್ವವಿದ್ಯಾಲಯದಿಂದ ಅಂಗೀಕಾರ ದೊರೆತಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಅವರು “ಎ ಮಷಿನ್ ಲರ್ನಿಂಗ್ ಫ್ರೇಮ್‌ವರ್ಕ್ ಟು ಐಡೆಂಟಿಫೈ ದಿ ಎಫೆಕ್ಟ್ ಆಫ್ ಪಾರ್ಕಿನ್ಸನ್ಸ್ ಡಿಸೀಸ್ ಆನ್ ವಿಷುಯಲ್ ಕಾಗ್ನಿಷನ್ ಅಬಿಲಿಟೀಸ್” ಎಂಬ ವಿಷಯದ ಕುರಿತು ಸಂಶೋಧನೆ ನಡೆಸಿದ್ದು, ಈ ಸಂಶೋಧನೆಯನ್ನು ಅಮೃತ ವಿಶ್ವವಿದ್ಯಾಪೀಠದ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರಾಧ್ಯಾಪಕ ಡಾ. ಅಮುದ ಜಿ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

ಈ ಸಂಶೋಧನೆಯು ಕೃತಕ ಬುದ್ಧಿಮತ್ತೆ ಹಾಗೂ ಯಂತ್ರ ಕಲಿಕೆ ತಂತ್ರಜ್ಞಾನಗಳ ನೆರವಿನಿಂದ ಪಾರ್ಕಿನ್ಸನ್ಸ್ ಕಾಯಿಲೆಯು ದೃಷ್ಟಿ-ಜ್ಞಾನ ಸಾಮರ್ಥ್ಯದ ಮೇಲೆ ಬೀರುವ ಪರಿಣಾಮವನ್ನು ಗುರುತಿಸಲು ನೂತನ ವಿಧಾನವನ್ನು ಅಭಿವೃದ್ಧಿಪಡಿಸಿದ್ದು, ನರಸಂಬಂಧಿ ಕಾಯಿಲೆಗಳ ಆರಂಭಿಕ ಪತ್ತೆ ಹಾಗೂ ವೈದ್ಯಕೀಯ ನಿರ್ಧಾರ ಪ್ರಕ್ರಿಯೆಗೆ ಮಹತ್ವದ ಕೊಡುಗೆ ನೀಡುವ ನಿರೀಕ್ಷೆಯಿದೆ.

ಡಾ.ಅಕ್ಷಯ್ ಶಾಂತಾರಾಮ್ ಹೊಸನಗರ ಪಟ್ಟಣದ ಹಿರಿಯ ಪತ್ರಕರ್ತ ಶಾಂತಾರಾಮ್ ಹಾಗೂ ಅಮೃತ ದಂಪತಿ ಪುತ್ರ.

Leave a Comment