HOSANAGARA | ತೈಲಬೆಲೆ ಏರಿಕೆ ಖಂಡಿಸಿ ರಸ್ತೆ ತಡೆ ನಡೆಸಿ ಬಿಜೆಪಿ ಬೃಹತ್ ಪ್ರತಿಭಟನೆ

Written by Mahesh Hindlemane

Published on:

HOSANAGARA | ರಾಜ್ಯ ಕಾಂಗ್ರೆಸ್ ಸರ್ಕಾರ (Congress Government) ಪೆಟ್ರೋಲ್ (Petrol) ಹಾಗೂ ಡಿಸೇಲ್ (Diesel) ಬೆಲೆಯನ್ನು ಏರಿಸಿದ್ದು ಇದರಿಂದ ಬಡವರು, ಮಧ್ಯಮ ವರ್ಗದವರು ಬದುಕಲು ಕಷ್ಟ ಎಂದು ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ ತಾಲ್ಲೂಕು ಬಿಜೆಪಿ (BJP) ಮಂಡಲದ ಅಧ್ಯಕ್ಷ ನಿಟ್ಟೂರು ಸುಬ್ರಹ್ಮಣ್ಯರವರ ನೇತೃತ್ವದಲ್ಲಿ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ನಡೆಸಿದರು.

WhatsApp Group Join Now
Telegram Group Join Now
Instagram Group Join Now

ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ 👇 https://bit.ly/3VyzBLv

ಪಟ್ಟಣದ ಚೌಡಮ್ಮ ರಸ್ತೆಯಲ್ಲಿರುವ ಬಿಜೆಪಿ ಕಛೇರಿಯಿಂದ ಕೋರ್ಟ್ ಸರ್ಕಲ್ ವರೆಗೆ ಪ್ರತಿಭಟನೆ ನಡೆಸಿ ನಂತರ ಕೋರ್ಟ್ ಸರ್ಕಲ್‌ನಲ್ಲಿ ರಸ್ತೆ ತಡೆ ನಡೆಸಿದರು. ನಂತರ ತಾಲ್ಲೂಕು ಕಛೇರಿಯವರೆಗೆ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ತಾಲ್ಲೂಕು ಕಛೇರಿಯ ಮುಂಭಾಗ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿ ತಕ್ಷಣ ತೈಲಬೆಲೆ ಇಳಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಸಿದರು.

ತಾಲ್ಲೂಕು ಮಂಡಲದ ಅಧ್ಯಕ್ಷ ನಿಟ್ಟೂರು ಸುಬ್ರಹ್ಮಣ್ಯ, ಎನ್.ಆರ್. ದೇವಾನಂದ್, ಉಮೇಶ್ ಕಂಚುಗಾರ್, ಎ.ವಿ. ಮಲ್ಲಿಕಾರ್ಜುನ, ಎನ್ ಶೀಧರ ಉಡುಪ, ಕೆ.ವಿ. ಕೃಷ್ಣಮೂರ್ತಿ, ಕಾಲಸಸಿ ಸತೀಶ, ನಾಗರ್ಜುನ, ಮಂಡಾನಿ ಮೋಹನ್, ಸತ್ಯನಾರಾಯಣ ವಿ, ವಿಜಯಕುಮಾರ್, ಎಂ.ಎನ್ ಸುದಾಕರ್, ಶ್ರೀಪತಿರಾವ್, ಕೋಣೆಮನೆ ಶಿವಕುಮಾರ್, ಮಂಜುನಾಥ್ ಸಂಜೀವ, ಹಾಲಗದ್ದೆ ಉಮೇಶ್, ಕೃಷ್ಣವೇಣಿ, ಗಾಯತ್ರಿ ನಾಗರಾಜ್, ಕೋಳಿ ಗೌತಮ್, ನಾಗರತ್ನ ರಮಾನಂದ ಇನ್ನೂ ಮುಂತಾದವರು ಈ ಪ್ರತಿಭಟನೆಯಲ್ಲಿ ಬಾಗವಹಿಸಿದ್ದರು.

Read more

Ration card:ನೀವು ಈ ರೀತಿಯ ತಪ್ಪುಗಳನ್ನ ಮಾಡಿದರೆ ರದ್ದಾಗಲಿದೆ ನಿಮ್ಮ ಪಡಿತರ ಚೀಟಿ

Gruha lakshmi:ಈ ರೂಲ್ಸ್ ಪಾಲಿಸಿದರೆ ಮಾತ್ರ ನಿಮ್ಮ ಖಾತೆ ಸೇರಲಿದೆ ಗೃಹಲಕ್ಷ್ಮಿ 11 ನೇ ಕಂತಿನ ಹಣ

ವಿದ್ಯುತ್‌ ಮಾರ್ಗ ದುರಸ್ಥಿ ವೇಳೆ ಕರೆಂಟ್ ಶಾಕ್, ಕಾರ್ಮಿಕನ ಸ್ಥಿತಿ ಗಂಭೀರ !

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment