SORABA | ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶಿವಮೊಗ್ಗ (Shivamogga) ಜಿಲ್ಲೆಯ ಸೊರಬ ತಾಲ್ಲೂಕಿನಲ್ಲಿರುವ ಚಂದ್ರಗುತ್ತಿ (Chandragutti) ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಕಾರ ಹುಣ್ಣಿಮೆ ಪ್ರಯುಕ್ತ ಸಾವಿರಾರು ಭಕ್ತರು ಶುಕ್ರವಾರ ಆಗಮಿಸಿ ಶ್ರದ್ಧಾಭಕ್ತಿಯಿಂದ ವಿಶೇಷ ಪೂಜೆ ಸಲ್ಲಿಸಿದರು.
Read More:ರಸ್ತೆ ಪಕ್ಕದಲ್ಲೇ ಪ್ರಸವ, ನವಜಾತ ಶಿಶುವನ್ನು ಅಲ್ಲೇ ಬಿಟ್ಟು ಹೋದ ಮಹಾತಾಯಿ !
ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ರಾಯಚೂರು, ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಮಳೆಯ ನಡುವೆಯೂ ಆಗಮಿಸಿ ಮಲೆನಾಡಿನ ಆರಾಧ್ಯ ದೇವಿ ರೇಣುಕಾದೇವಿಯನ್ನು ದರ್ಶನ ಪಡೆದು ಉದೋ ಉದೋ ಎಂದು ಜೈಕಾರ ಹಾಕಿ ಭಕ್ತಿ ಸಮರ್ಪಿಸಿದರು.

ಪರಿವಾರ ದೇವರುಗಳಾದ ನಾಗದೇವತೆ, ಮಾತಂಗಿ, ಕಾಲಭೈರವ, ಪರಶುರಾಮ ತ್ರಿಶೂಲದ ಭೈರಪ್ಪ ದೇವರಿಗೆ ಹಾಗೂ ತೊಟ್ಟಿಲು ಬಾವಿಗೆ ಹುಣ್ಣಿಮೆಯ ವಿಶೇಷ ಪೂಜೆ ಸಲ್ಲಿಸಲಾಯಿತು.
ದೇವರ ಹೆಸರಿನಲ್ಲಿ ಭಕ್ತರು ಧಾರ್ಮಿಕ ಪೂಜಾ ವಿಧಿ ವಿಧಾನಗಳಾದ ಪಡ್ಲಿಗೆ ತುಂಬಿಸುವುದು, ಮುಡಿ ನೀಡುವುದು, ಕಿವಿ ಚುಚ್ಚಿಸುವುದು, ವಿವಿಧ ಸೇವೆ ಮುಂತಾದವುಗಳನ್ನು ಆಚರಿಸಿದರು.
ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ ಹಿನ್ನೆಲೆಯಲ್ಲಿ ಚಂದ್ರಗುತ್ತಿ ಮುಖ್ಯ ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆಯಿಂದ ಸಂಚಾರ ಅಸ್ತವ್ಯಸ್ತಗೊಂಡಿತು.
Read More:ರೈತರಿಗೆ ಸಿಹಿಸುದ್ದಿ, 14 ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು