ಹೊಸನಗರ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ, ಪಟ್ಟಣ ಪಂಚಾಯತಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಆಟೋ ಚಾಲಕರ ಸಂಘದ ಸಹಯೋಗದಲ್ಲಿ ಪಟ್ಟಣದ ಬಸ್ ನಿಲ್ದಾಣದ ಸಮೀಪ ಇರುವ ಸಮುದಾಯ ಅಭಿವೃದ್ಧಿ ಕೇಂದ್ರ ಭವನದಲ್ಲಿ ಇದೇ ಆಗಸ್ಟ್ 11ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ಸರಿಯಾಗಿ ಆಯುಷ್ ವಿಶೇಷ ಆರೋಗ್ಯ ಶಿಬಿರ – 2026 ಹಮ್ಮಿಕೊಳ್ಳಲಾಗಿದೆ.
ತಾಲೂಕಿನ ನುರಿತ ಆಯುಷ್ ವೈದ್ಯರಾದ ಡಾ. ಕೆ.ವಿ. ಪತಂಜಲಿ, ಡಾ. ಜಿ.ಎಂ.ಹರೀಶ್, ಡಾ. ಪ್ರತಿಮಾ ಹಾಗೂ ಡಾ. ಪ್ರದೀಪ್ ಕುಮಾರ್ ಸೇರಿದಂತೆ ಹಲವು ಆಯುಷ್ ವೈದ್ಯರು ಶಿಬಿರದಲ್ಲಿ ಭಾಗವಹಿಸಿ, ರಕ್ತದೊತ್ತಡ, ಮಧುಮೇಹ, ಸಂಧು ಕೀಲುಗಳ ನೋವು, ಚರ್ಮದ ಕಾಯಿಲೆ, ಅಲರ್ಜಿ, ಕೆಮ್ಮು, ಉಸಿರಾಟದ ಸಮಸ್ಯೆ, ಸ್ತ್ರೀ ರೋಗ ಸೇರಿದಂತೆ ಇತರೆ ಕಾಯಿಲೆಗಳ ತಪಾಸಣೆ, ಚಿಕಿತ್ಸೆ ಮತ್ತು ಉಚಿತ ಔಷಧಿ ವಿತರಣೆ ಮಾಡಲಿದ್ದಾರೆ.
ಪಟ್ಟಣ ಪಂಚಾಯತಿ ನೌಕರರು, ಅಂಗನವಾಡಿ ಕಾರ್ಯಕರ್ತೆಯರು, ಆಟೋ ಚಾಲಕರು ಸೇರಿದಂತೆ ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯುವಂತೆ ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ಎಂ.ಎನ್. ಹರೀಶ್ ಕೋರಿದ್ದಾರೆ.