ಮಲೆನಾಡಿನ ವಿಶ್ವಾಸಾರ್ಹ ಸುದ್ದಿ · ಶಿವಮೊಗ್ಗ · ಚಿಕ್ಕಮಗಳೂರು · ಕರ್ನಾಟಕ
ಮುಖಪುಟತೀರ್ಥಹಳ್ಳಿ
ತೀರ್ಥಹಳ್ಳಿ

ಚಲಿಸುತ್ತಿದ್ದ KSRTC ಬಸ್‌ನಿಂದ ಕಳಚಿ ಬಿದ್ದ ಟೈರ್: ಆಗುಂಬೆ ಸಮೀಪ ತಪ್ಪಿದ ದುರಂತ

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಿಂದ ಟೈರ್ ಕಳಚಿ ಬಿದ್ದ ಘಟನೆ ನಡೆದಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದೆ. ಉಡುಪಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಈ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಬಸ್ ಚಲಿಸುತ್ತಿದ್ದ ವೇಳೆ ದಿಢೀರನೆ ಟೈರ್ ಕಳಚಿ…

Koushik G K
ಪ್ರಕಟಿತ: 10 Aug 2026, 8:08 PM · ನವೀಕರಿಸಿದ: 10 Aug 2026, 8:08 PM

ಸುದ್ದಿ ಸಾರಾಂಶ

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಿಂದ ಟೈರ್ ಕಳಚಿ ಬಿದ್ದ ಘಟನೆ ನಡೆದಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದೆ. ಉಡುಪಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಈ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಬಸ್ ಚಲಿಸುತ್ತಿದ್ದ ವೇಳೆ ದಿಢೀರನೆ…

WhatsApp Group Join Now
Telegram Group Join Now
Instagram Group Join Now
ಸ್ಥಳತೀರ್ಥಹಳ್ಳಿ
ಪ್ರಕಟಿತ ಸಮಯ10 Aug 2026, 8:08 PM
ಮೂಲ ಪರಿಶೀಲನೆಸ್ಥಳೀಯ ಮಾಹಿತಿ, ಅಧಿಕೃತ ಪ್ರಕಟಣೆ ಅಥವಾ ವರದಿಗಾರರ ಪರಿಶೀಲನೆ ಆಧಾರ.
📢 Stay Updated! Join our WhatsApp Channel Now →

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಿಂದ ಟೈರ್ ಕಳಚಿ ಬಿದ್ದ ಘಟನೆ ನಡೆದಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದೆ.

ಉಡುಪಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಈ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಬಸ್ ಚಲಿಸುತ್ತಿದ್ದ ವೇಳೆ ದಿಢೀರನೆ ಟೈರ್ ಕಳಚಿ ಬಿದ್ದಿದೆ. ಪರಿಸ್ಥಿತಿಯನ್ನು ಗಮನಿಸಿದ ಚಾಲಕ ತಕ್ಷಣವೇ ಬಸ್ ಅನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಸುರಕ್ಷಿತವಾಗಿ ನಿಲ್ಲಿಸಿದ್ದಾರೆ.

ಘಟನೆ ನಡೆದ ವೇಳೆ ಬಸ್‌ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಚಾಲಕನ ಸಮಯೋಚಿತ ನಿರ್ಧಾರದಿಂದ ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿದ್ದಾರೆ. ಯಾವುದೇ ದೊಡ್ಡ ಅವಘಡ ಸಂಭವಿಸಿಲ್ಲ.

ಘಟನೆ ಬಳಿಕ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಯಾಣಿಕರ ಮುಂದಿನ ಪ್ರಯಾಣಕ್ಕಾಗಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.

ಬಸ್‌ನ ತಾಂತ್ರಿಕ ದೋಷದ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಯುತ್ತಿದೆ. ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಇಂತಹ ವಾಹನಗಳ ನಿಯಮಿತ ತಪಾಸಣೆ ಅಗತ್ಯ ಎಂಬ ಮಾತುಗಳು ಸ್ಥಳೀಯರಿಂದ ಕೇಳಿಬಂದಿವೆ.

ಸಂಪಾದಕೀಯ ಸೂಚನೆ: ಈ ಸುದ್ದಿಯಲ್ಲಿ ತಪ್ಪು ಅಥವಾ ತಿದ್ದುಪಡಿ ಅಗತ್ಯವಿದ್ದರೆ ನಮ್ಮ ಸಂಪರ್ಕ ಪುಟದ ಮೂಲಕ ತಿಳಿಸಿ. ಪ್ರಕಟಿತ ಮಾಹಿತಿಯನ್ನು ಪರಿಶೀಲಿಸಿ ಅಗತ್ಯವಿದ್ದರೆ ನವೀಕರಿಸಲಾಗುತ್ತದೆ.
ಸುದ್ದಿ ಹಂಚಿಕೊಳ್ಳಿ
ಲೇಖಕರ ಮಾಹಿತಿ

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

ಈ ಲೇಖಕರ ಇನ್ನಷ್ಟು ಸುದ್ದಿಗಳು