ತೀರ್ಥಹಳ್ಳಿ : ಮಾರುತಿ ಓಮ್ನಿ (Maruthi Omni) ಕಾರಿನಲ್ಲಿ ಗಾಂಜಾ (Ganja) ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ತೀರ್ಥಹಳ್ಳಿ (Thirthahalli) ಪೊಲೀಸರು (Police) ಬಂಧಿಸಿದ್ದಾರೆ.
ಸಾಗರ (Sagara) ತಾಲೂಕಿನ ಆನಂದಪುರ ಸಮೀಪದ ಆಚಾಪುರ ಗ್ರಾಮದ ಮಹಮ್ಮದ್ ಬೇಗ್ (38) ಮತ್ತು ಹೊಸನಗರ (Hosanagara) ತಾಲೂಕಿನ ಕೆಂಚನಾಲ ಗ್ರಾಮದ ಗಜೇಂದ್ರ@ಗಜ (37) ಬಂಧಿತ ಆರೋಪಿಗಳು. ಇವರು ಗಾಂಜಾ ಮಾರಾಟ ಮಾಡಲು ಸಾಗರ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಓಮ್ನಿ ಕಾರಿನಲ್ಲಿ ಬರುವಾಗ ಮಾಲು ಸಮೇತ ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಇವರಿಂದ 1.60 ಲಕ್ಷ ರೂ. ಮೌಲ್ಯದ 2.150 ಕೆ.ಜಿ ತೂಕದ ಒಣ ಗಾಂಜಾ ಮತ್ತು 2.50 ಲಕ್ಷ ರೂ. ಅಂದಾಜು ಮೌಲ್ಯದ ಓಮ್ನಿ ಕಾರನ್ನು ವಶಕ್ಕೆ ಪಡೆಯಲಾಗಿದೆ.
ಎಸ್ಪಿ ಮಿಥುನ್ ಕುಮಾರ್ ಜಿ.ಕೆ, ಅಡಿಷನಲ್ ಎಸ್ಪಿ ಅನಿಲ್ ಕುಮಾರ ಭೂಮರೆಡ್ಡಿ, ಎ. ಜಿ ಕಾರಿಯಪ್ಪರ ಮಾರ್ಗದರ್ಶನದಲ್ಲಿ, ತೀರ್ಥಹಳ್ಳಿ ಡಿವೈಎಸ್ಪಿ ಗಜಾನನ ವಾಮನ ಸುತಾರರ ನೇತೃತ್ವದಲ್ಲಿ ತೀರ್ಥಹಳ್ಳಿ ಠಾಣೆಯ ಪಿಐ ಅಶ್ವತ್ ಗೌಡ ಜೆ, ಪಿಎಸ್ ಐ ಶಿವನಗೌಡ ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡ ಈ ದಾಳಿ ನಡೆಸಿದೆ.
Read More:ಹೊಟ್ಟೆ ನೋವು ತಾಳಲಾರದೆ ನೇಣಿಗೆ ಶರಣಾದ ಗೃಹಿಣಿ !

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.