SHIVAMOGGA | ಬೆಳ್ಳಂಬೆಳಗ್ಗೆ ರೌಡಿಶೀಟರ್ ಕಾಲಿಗೆ ಗುಂಡೇಟು !

Written by malnadtimes.com

Published on:

SHIVAMOGGA | ಬಂಧಿಸಲು ತೆರಳಿದ್ದ ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಫೈರಿಂಗ್ ಮಾಡಿದ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಜು.12ರವರೆಗೆ ಮುಂದುವರೆಯಲಿದೆ ಭಾರಿ ಮಳೆ, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಪೊಲೀಸ್‌ ಸಿಬ್ಬಂದಿ ಅರ್ಜುನ್ ಮೇಲೆ ಆರೋಪಿ ರಜಾಕ್‌ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ ಆತ್ಮರಕ್ಷಣೆಗಾಗಿ ರೌಡಿಶೀಟರ್ ರಜಾಕ್ ಎಂಬುವನ ಕಾಲಿಗೆ ಇನ್ಸ್‌ಪೆಕ್ಟರ್ ಲಕ್ಷ್ಮಿಪತಿ ಗುಂಡು ಹೊಡೆದು ಬಂಧಿಸಲಾಗಿದೆ‌.

ಹೊಳೆಹೊನ್ನೂರು ಠಾಣೆ ಇನ್ಸ್‌ಪೆಕ್ಟರ್‌ ನೇತೃತ್ವದಲ್ಲಿ ಬಂಧನಕ್ಕೆ ತೆರಳಿದ್ದಾಗ ಕುಂಸಿ ಪೊಲೀಸ್‌ ಠಾಣೆ ವ್ಯಾಪ್ತಿಯ ತ್ಯಾಜ್ಯವಳ್ಳಿ ಅರಣ್ಯ ಪ್ರದೇಶದಲ್ಲಿ ಬೆಳಗ್ಗೆ ಈ ಘಟನೆ ನಡೆದಿದ್ದು, ರಜಾಕ್ ಮೇಲೆ ಕೊಲೆ ಯತ್ನ ಸೇರಿ ಐದಾರು ಪ್ರಕರಣಗಳು ದಾಖಲಾಗಿದೆ.

ಕುಗ್ರಾಮದಲ್ಲೊಂದು ಶಾಲೆ, ಒಬ್ಬರೇ ಶಿಕ್ಷಕ, 29 ವರ್ಷ ಸೇವೆ !

ಆರೋಪಿ ರಜಾಕ್ ಹಾಗೂ ಹಲ್ಲೆಗೊಳಗಾದ ಪೊಲೀಸ್ ಸಿಬ್ಬಂದಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Leave a Comment