HOSANAGARA | ಭಾರಿ ಗಾಳಿ, ಮಳೆಗೆ ಜಾನುವಾರು ಕೊಟ್ಟಿಗೆ (Cow Shed) ಮೇಲೆ ಮರ (Tree) ಬಿದ್ದು ಹಾನಿಯಾದ ಘಟನೆ ಕೋಡೂರು (Kodur) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಗುಂಡಿ ಗ್ರಾಮದ ಶಾಂತಪುರದಲ್ಲಿ ನಡೆದಿದೆ.
ಸುಮಾ ಎಂಬುವರಿಗೆ ಸೇರಿದ ಜಾನುವಾರು ಕೊಟ್ಟಿಗೆ ಇದಾಗಿದ್ದು ಬೃಹತ್ ಗಾತ್ರದ ಮರ ಉರುಳಿ ಬಿದ್ದು ಕೊಟ್ಟಿಗೆ ಸಂಪೂರ್ಣವಾಗಿ ಜಖಂಗೊಂಡಿದೆ.
ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ವಿಷಯ ತಿಳಿದು ಕೋಡೂರು ಪಿಡಿಒ ನಾಗರಾಜ್ ಹಾಗೂ ವಿಎ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನೂ ತಾಲ್ಲೂಕಿನ ಹರಿದ್ರಾವತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ. ಹುಣಸವಳ್ಳಿ ಗ್ರಾಮದಲ್ಲೂ ಕೊಟ್ಟಿಗೆ ಮೇಲೆ ಮರ ಬಿದ್ದ ಘಟನೆ ವರದಿಯಾಗಿದೆ.
ಎನ್.ಜಿ ನಾಗೇಶ ಬಿನ್ ಎನ್. ಗುಂಡಪ್ಪ ಎಂಬುವವರಿಗೆ ಸೇರಿದ ದನದ ಕೊಟ್ಟಿಗೆಯ ಮೇಲೂ ಮರ ಬಿದ್ದು ಭಾಗಶಃ ಕೊಟ್ಟಿಗೆ ಹಾನಿಯಾಗಿದೆ.
SHIVAMOGGA | ಮಳೆಯಿಂದ ಜಿಲ್ಲೆಯಲ್ಲಿ ಈವರೆಗೆ ಏನೆಲ್ಲ ಹಾನಿ ಸಂಭವಿಸಿದೆ ?

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.