HOSANAGARA | ಭಾರಿ ಗಾಳಿ, ಮಳೆಗೆ ಜಾನುವಾರು ಕೊಟ್ಟಿಗೆ (Cow Shed) ಮೇಲೆ ಮರ (Tree) ಬಿದ್ದು ಹಾನಿಯಾದ ಘಟನೆ ಕೋಡೂರು (Kodur) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಗುಂಡಿ ಗ್ರಾಮದ ಶಾಂತಪುರದಲ್ಲಿ ನಡೆದಿದೆ.
ಸುಮಾ ಎಂಬುವರಿಗೆ ಸೇರಿದ ಜಾನುವಾರು ಕೊಟ್ಟಿಗೆ ಇದಾಗಿದ್ದು ಬೃಹತ್ ಗಾತ್ರದ ಮರ ಉರುಳಿ ಬಿದ್ದು ಕೊಟ್ಟಿಗೆ ಸಂಪೂರ್ಣವಾಗಿ ಜಖಂಗೊಂಡಿದೆ.
ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ವಿಷಯ ತಿಳಿದು ಕೋಡೂರು ಪಿಡಿಒ ನಾಗರಾಜ್ ಹಾಗೂ ವಿಎ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನೂ ತಾಲ್ಲೂಕಿನ ಹರಿದ್ರಾವತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ. ಹುಣಸವಳ್ಳಿ ಗ್ರಾಮದಲ್ಲೂ ಕೊಟ್ಟಿಗೆ ಮೇಲೆ ಮರ ಬಿದ್ದ ಘಟನೆ ವರದಿಯಾಗಿದೆ.
ಎನ್.ಜಿ ನಾಗೇಶ ಬಿನ್ ಎನ್. ಗುಂಡಪ್ಪ ಎಂಬುವವರಿಗೆ ಸೇರಿದ ದನದ ಕೊಟ್ಟಿಗೆಯ ಮೇಲೂ ಮರ ಬಿದ್ದು ಭಾಗಶಃ ಕೊಟ್ಟಿಗೆ ಹಾನಿಯಾಗಿದೆ.
SHIVAMOGGA | ಮಳೆಯಿಂದ ಜಿಲ್ಲೆಯಲ್ಲಿ ಈವರೆಗೆ ಏನೆಲ್ಲ ಹಾನಿ ಸಂಭವಿಸಿದೆ ?

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.