SHIVAMOGGA | ಜಿಲ್ಲೆಯಲ್ಲಿ ಈ ವರ್ಷ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆಯು ಇಂತಹ ಅನುಮಾನಕ್ಕೆ ಕಾರಣವಾಗಿದೆ. ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲಿ ಪಿ.ಎಸ್.ಟಿ ಮತ್ತು ಜಿ.ಪಿ.ಟಿ ಶಿಕ್ಷಕರ ಅವೈಜ್ಞಾನಿಕ ಹಂಚಿಕೆ ಒಂದು ಕಡೆಯಾಗಿದ್ದರೆ, ಇನ್ನೊಂದು ಕಡೆ ನೇಮಕಾತಿಯೇ ಆಗಿರದ ಕನ್ನಡ ಜಿ.ಪಿ.ಟಿ ಶಿಕ್ಷಕರ ಹುದ್ದೆಗಳನ್ನು ಮಾತ್ರ ತೋರಿಸಿ 3 ದಿನಗಳ ವರ್ಗಾವಣೆಯ ನಾಟಕವನ್ನು ಇಲಾಖೆ ಮುಗಿಸಿದೆ.
ವರ್ಗಾವಣೆಯನ್ನು ಬಯಸಿ ಬಂದ ಶಿಕ್ಷಕರು ಕೆಲವು ಸಮಯ ವರ್ಗಾವಣೆ ಪ್ರಕ್ರಿಯೆಯನ್ನು ತಡೆಹಿಡಿದರು ಪ್ರಯೋಜನವಾಗಲಿಲ್ಲ. ಜಿಲ್ಲೆಯಲ್ಲಿ 250 ಕ್ಕಿಂತ ಹೆಚ್ಚು ಕನ್ನಡ ಜಿ.ಪಿ.ಟಿ ಶಿಕ್ಷಕರ ಹುದ್ದೆಗಳನ್ನು ತೋರಿಸಿದ್ದು ಈ ಹುದ್ದೆಗೆ ನೇರ ನೇಮಕಾತಿ ಅಥವಾ ಪಿ.ಎಸ್.ಟಿ ಶಿಕ್ಷಕರಿಗೆ ಮುಂಬಡ್ತಿಯನ್ನು ನೀಡುವ ವಿಚಾರದಲ್ಲಿ ಗೊಂದಲವನ್ನು ಹೊಂದಿದ್ದು ಇದು ಕಲಿಕಾ ಬಲವರ್ಧನೆಗೆ ಮಾರಕವಾಗಿದೆ.

ಜಿಲ್ಲೆಯಲ್ಲಿ ಬೆರಳೆಣಿಕೆಯ ಶಾಲೆಗಳು ಮಾತ್ರ ಇಂಗ್ಲಿಷ್ ಭಾಷಾ ಶಿಕ್ಷಕರನ್ನು ಹೊಂದಿದ್ದು, ಯಾವ ಶಾಲೆಯಲ್ಲೂ ಇಂಗ್ಲಿಷ್ ಶಿಕ್ಷಕರ ಹುದ್ದೆಗಳನ್ನು ತೋರಿಸದಿರುವುದು ಖಾಸಗಿ ಶಾಲೆಗಳ ದಾಖಲಾತಿಯನ್ನು ಹೆಚ್ಚಿಸುವ ಹುನ್ನಾರವಾಗಿದೆ.
ನಿಗದಿತ ಅರ್ಹತೆಯನ್ನು ಹೊಂದಿದ್ದರು ತಮಗೆ ಬಡ್ತಿ ನೀಡುವ ಬದಲು ಹಿಂಬಡ್ತಿಗೆ ಇಳಿಸಿ 1 ರಿಂದ 7ನೇ ತರಗತಿಗೆ ಬೋಧಿಸುವ ನಮ್ಮನ್ನು 1 ರಿಂದ 5ನೇ ತರಗತಿಗೆ ಸೀಮಿತ ಮಾಡಿದ್ದಾರೆಂದು ಪಿ.ಎಸ್.ಟಿ ಶಿಕ್ಷಕರು ಅಳಲನ್ನು ತೋಡಿಕೊಂಡಿದ್ದರೆ, ಇನ್ನೊಂದೆಡೆ ವರ್ಗಾವಣೆಯು ಸಿಗದ ಹತಾಶೆಯಲ್ಲಿ ಅಧಿಕಾರಿಗಳಿಗೆ ಹಿಡಿಶಾಪ ಹಾಕಿದ್ದಾರೆ.
ಇನ್ನಾದರೂ ಶಿಕ್ಷಣ ಸಚಿವರು ಅಧಿಕಾರಿಗಳಿಗೆ ತಮ್ಮ ಅಧಿಕಾರವನ್ನು ಕೊಟ್ಟು ಕುಳಿತಿರುವ ಬದಲು ಶಿಕ್ಷಕರಿಗೆ ಸಹಕಾರಿಯಾಗಲಿ ಎಂಬುದೇ ಶಿಕ್ಷಕರ ಆಶಯ.
Read more
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
HosanagaraJune 5, 2025ಹೊಸನಗರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ | ವಿದ್ಯುತ್ ಸಮಸ್ಯೆ ಬಗೆಹರಿಸಲು ತುರ್ತು ಕ್ರಮಕೈಗೊಳ್ಳಿ ; ಶಾಸಕ ಬೇಳೂರು ಗೋಪಾಲಕೃಷ್ಣ
RipponpeteJune 5, 2025ಮುರುಘಾಮಠದ ಉತ್ತರಾಧಿಕಾರಿ ಉನ್ನತ ಅಧ್ಯಯನಕ್ಕಾಗಿ ಶಿವಯೋಗ ಮಂದಿರದ ಗುರುಕುಲಕ್ಕೆ
HosanagaraJune 5, 2025ಹೊಸನಗರ ಪ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿಗಾಗಿ ಪರದಾಟ…!
RipponpeteJune 4, 2025ಅಮ್ಮನಘಟ್ಟ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ; ದೇವಸ್ಥಾನದಲ್ಲಿ ಜಾತಿ ಭೇದ ಭಾವನೆ ಬೇಡ