SAGARA | ಟಿಪ್ಪರ್ ಲಾರಿ (Larry) ಮತ್ತು ಬೈಕ್ (Bike) ನಡುವೆ ಸಂಭವಿಸಿದ ಅಪಘಾತದಲ್ಲಿ (Accident) ಓರ್ವ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಸಾಗರ ನಗರದಿಂದ ಗೆಣಸಿನಕುಣಿ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಹಾಗೂ ಕಟ್ಟಿನಕಾರು ಸಮೀಪದ ಪಡಬೀಡು ಗ್ರಾಮದಿಂದ ಸಾಗರಕ್ಕೆ ತೆರಳುತ್ತಿದ್ದ ಬೈಕ್ ನಡುವೆ ಗುರುವಾರ ಮಧ್ಯಾಹ್ನ ಆವಿನಹಳ್ಳಿ ಸಮೀಪ ಈ ಅಪಘಾತ ಸಂಭವಿಸಿದೆ.
ಗಾಯಾಳು ಕಟ್ಟಿನಕಾರು ಗ್ರಾಮದ ಬೈಕ್ ಸವಾರ ಸಚಿನ್ (19) ಶಿವಮೊಗ್ಗದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಸಹಸವಾರ ಸುಮಂತ್ರಿಗೆ ಗಾಯಗಳಾಗಿದ್ದು ಕುಂದಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಗೆಣಸಿಕುಣಿಯ ಸಂಪೇಕೈ ಮಂಜು ಎನ್ನುವವರಿಗೆ ಸೇರಿದ್ದ ಟಿಪ್ಪರ್ ಲಾರಿ ಸಾಗರದಲ್ಲಿ ರಿಪೇರಿ ಮಾಡಿಸಿಕೊಂಡು ವಾಪಾಸ್ ಬರುತ್ತಿರುವಾಗ ಈ ಘಟನೆ ಸಂಭವಿಸಿರುವುದಾಗಿ ತಿಳಿದುಬಂದಿದೆ.

ಗಂಭೀರವಾಗಿ ಗಾಯಗೊಂಡಿದ್ದ ಸಚಿನ್ರನ್ನು ತಕ್ಷಣ ಆಂಬ್ಯುಲೆನ್ಸ್ನಲ್ಲಿ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಸಚಿನ್ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.