CHIKKAMAGALURU | ಆಸ್ತಿಯ ಆಸೆಗಾಗಿ ಅಕ್ಕಂದಿರುವ ಬಾವನ ಜೊತೆ ಸೇರಿ ಸಹೋದರನನ್ನೇ ಕೊಲೆ (Murder) ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ (Tharikere) ನಗರದಲ್ಲಿಂದು ನಡೆದಿದೆ.
ಪಟ್ಟಣದ ಚೌಡೇಶ್ವರಿ ಕಾಲೋನಿಯ ರಾಘವೇಂದ್ರ (43) ಕೊಲೆಯಾದ ವ್ಯಕ್ತಿ. ರಕ್ತ ಸಂಬಂಧಿಗಳೇ ಬೆಳ್ಳಂಬೆಳಗ್ಗೆಯೇ ಕಣ್ಣಿಗೆ ಖಾರದ ಪುಡಿ ಎರಚಿ ಈ ಕೃತ್ಯ ಎಸಗಿದ್ದಾರೆ.

ಆಸ್ತಿಗಾಗಿ ಕುಟುಂಬಸ್ಥರ ಜೊತೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ಇದೇ ಕಾರಣಕ್ಕೆ ಬಾವನ ಜೊತೆಗೂಡಿ ಮೂವರು ಸಹೋದರಿಯರು ತಮ್ಮನನ್ನು ಕೊಲೆ ಮಾಡಿದ್ದಾರೆ. ಮಲಗಿದ್ದಲ್ಲೇ ಮನಸ್ಸೋ ಇಚ್ಛೆ ಕೊಚ್ಚಿ ಹಾಕಿದ್ದಾರೆ. ಮೃತ ರಾಘವೇಂದ್ರ ಅವರ ಅಕ್ಕಂದಿರಾದ ಸುಮಾ, ಸುಧಾ, ರೇಣುಕಾ ಮತ್ತು ಬಾವ ಸಿದ್ದರಾಮಪ್ಪ ಆರೋಪಿಗಳಾಗಿದ್ದಾರೆ.
ಹೇಗಾಯ್ತು ಘಟನೆ ?
ರಾಘವೇಂದ್ರ ಮಂಚದ ಮೇಲೆ ಗಾಢ ನಿದ್ದೆಯಲ್ಲಿದ್ದರು. ಬೆಳಗಿನಜಾವ ಎಚ್ಚರವಾಗಿ ಮೈ ಮುರಿಯುತ್ತಾ ಎದ್ದೇಳಲು ಕಣ್ಣು ಉಜ್ಜಿಕೊಳ್ಳಲು ಮುಂದಾಗಿದ್ದರು. ಆದರೆ ಇದಕ್ಕೂ ಮೊದಲೇ ಸಹೋದರನನ್ನು ಸುತ್ತವರಿದಿದ್ದ ನರಹಂತಕಿ ಸಹೋದರಿಯರು ಆಯುಧಗಳನ್ನು ಹಿಡಿದು ನಿಂತಿದ್ದರು.

ರಾಘವೇಂದ್ರ ಎದ್ದೊಡನೆ ಕಣ್ಣಿಗೆ ಖಾರದ ಪುಡಿ ಎರಚಿದ್ದಾರೆ. ಆತ ಏನಾಯಿತು ಎಂದು ಯೋಚಿಸುವ ಮುನ್ನವೇ ಸಿಕ್ಕ ಸಿಕ್ಕ ಕಡೆಗಳಲ್ಲಿ ಚಾಕುವಿನಿಂದ ಕೊಚ್ಚಿ ಹಾಕಿದ್ದಾರೆ. ಇವರ ರಾಕ್ಷಸಿ ಕೌರ್ಯಕ್ಕೆ ರಾಘವೇಂದ್ರ ಚೀರಾಡುತ್ತಾ, ಪ್ರಾಣ ಉಳಿಸಿಕೊಳ್ಳಲಾಗದೆ ಕ್ಷಣ ಮಾತ್ರದಲ್ಲಿ ಒದ್ದಾಡಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಎಸ್ಪಿ ವಿಕ್ರಂ ಅಮಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಸ್ತಿಗಾಗಿ ಅಮಾನುಷವಾಗಿ ಅಣ್ಣನನ್ನೇ ಕೊಂದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More
Post Office Scholarship:ಈ ವಿದ್ಯಾರ್ಥಿಗಳಿಗೆ ಸಿಗಲಿದೆ 6,000 ವಿದ್ಯಾರ್ಥಿವೇತನ !
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು
HosanagaraJune 1, 2025ಹೊಸನಗರ ; ಜೂ. 2 ಮತ್ತು 3ಕ್ಕೆ ತಾಲೂಕಿನಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮ
Adike RateJune 1, 2025Arecanut, Black Pepper Price 31 May 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?
SagaraMay 31, 2025ಪತ್ರಕರ್ತನ ಮೇಲೆ ಹಲ್ಲೆ ಯತ್ನ, ಜೀವ ಬೆದರಿಕೆ ; ಕ್ರಮಕ್ಕೆ ಒತ್ತಾಯ