ARECANUT ; ಪ್ರಸ್ತುತ ಹೆಚ್ಚು ಮಳೆ, ಮೋಡಕವಿದ ವಾತಾವರಣ, ತೋಟದಲ್ಲಿ ನೀರು ನಿಲ್ಲುವಿಕೆ, ಹೆಚ್ಚಾದ ಮಣ್ಣಿನ ತೇವಾಂಶ, ಅಧಿಕ ಆಧ್ರತೆ (ಶೇ. 90 ಕ್ಕಿಂತ ಹೆಚ್ಚು) ಮತ್ತು ಸೂರ್ಯನ ಬೆಳಕಿನ ಕೊರತೆಯಿಂದ ಕೊಳೆ ರೋಗವು ಹೆಚ್ಚಿರುವುದರಿಂದ ಈ ಕೆಳಕಂಡ ಕ್ರಮಗಳನ್ನು ಅನುಸರಿಸಬೇಕು ಎಂದು ಡಾ. ನಾಗರಾಜಪ್ಪ ಅಡಿವಪ್ಪರ್, ಮುಖ್ಯಸ್ಥರು, ಅಡಿಕೆ ಸಂಶೋಧನಾ ಕೇಂದ್ರ ನವುಲೆ ಶಿವಮೊಗ್ಗ ಅವರು ಮಾಹಿತಿ ನೀಡಿದ್ದಾರೆ.
ತೋಟಗಳಲ್ಲಿ ಹೆಚ್ಚಾಗಿ ನೀರು ನಿಲ್ಲದಂತೆ ಬಸಿಗಾಲುವೆ ಚೊಕ್ಕ ಮಾಡಿ ನೀರು ಹರಿದು ಹೋಗಲು ವ್ಯವಸ್ಥೆ ಮಾಡುವುದು. ಕೊಳೆ ಬಾಧಿತ ಬಿದ್ದಂತಹ ಕಾಯಿಗಳನ್ನು ಆರಿಸಿ ಹೊರಗಡೆ ಹಾಕಬೇಕು. ಗಾಳಿ ಆಡುವಂತೆ ಮಾಡಲು ಅಂತರ ಬೆಳೆಗಳ ಹಾಗೂ ತೋಟದ ಅಂಚಿನ ಮರಗಳ ಹೆಚ್ಚುವರಿ ರೆಂಬೆಗಳನ್ನು ಕತ್ತರಿಸಿ ತೆಗೆಯುವುದು. ವೈಜ್ಞಾನಿಕವಾಗಿ ತಯಾರಿಸಿದ ರಸಸಾರ (pH) 7ರ ಶೇ.1 ರ ಬೋರ್ಡೋದ್ರಾವಣ ಅಥವಾ ಶೇ.0.2 ರ ಮೆಟಲಾಕ್ಸಿಲ್ ಎಂ.ಜಡ್ (2 ಗ್ರಾಂ 1 ಪ್ರತಿ ಲೀ. ನೀರಿನಲ್ಲಿ ಕರಗಿಸಿ) ಅಥವಾ ಶೇ.0.2 ರ ಮೆಟಲಾಕ್ಸಿಲ್ + ಮ್ಯಾಂಕೋಜೆಬ್ (2 ಗ್ರಾಂ 1 ಪ್ರತಿ ಲೀ. ನೀರಿನಲ್ಲಿ ಕರಗಿಸಿ) ಅಥವಾ ಶೇ. 0.1 ರ ಮ್ಯಾಂಡಿಪ್ರೇಪಮಿಡ್ (1 ಮಿ.ಲಿ ಪ್ರತಿ ಲೀ. ನೀರಿನಲ್ಲಿ) ಅಥವಾ ಶೇ. 0.3 ರ ತಾಮ್ರದ ಆಕ್ಸಿಕ್ಲೋರೈಡ್ (3 ಗ್ರಾಂ 1 ಪ್ರತಿ ಲೀ. ನೀರಿನಲ್ಲಿ ಕರಗಿಸಿ) ದಿಂದ ಗೊನೆಗಳಿಗೆ ಹಾಗೂ ಎಲೆಗಳಿಗೆ ಮತ್ತು ಸುಳಿಭಾಗಕ್ಕೆ ಚೆನ್ನಾಗಿ ನೆನೆಯುವಂತೆ ಸೂಕ್ತ ಅಂಟಿನೊಂದಿಗೆ (ರಾಳ) ಸಿಂಪರಣೆ ಮಾಡಿ.

ಹೀಗೆ ಮಾಡುವುದರಿಂದ ಕೊಳೆರೋಗದ ಜೊತೆಗೆ ಎಲೆಚುಕ್ಕೆ ರೋಗವನ್ನು ನಿಯಂತ್ರಿಸಲು ಸಹಾಯವಾಗುತ್ತದೆ. ಈ ಮೇಲಿನ ಕ್ರಮಗಳನ್ನು ಸಾಮೂಹಿಕವಾಗಿ ಏಕಕಾಲದಲ್ಲಿ ಅನುಸರಿಸಿದಲ್ಲಿ ಮರಗಳನ್ನು ಸುಳಿಕೊಳೆ ಅಥವಾ ಶಿರಕೊಳೆಯಿಂದ ಸಾಯುವುದನ್ನು ತಪ್ಪಿಸಬಹುದಾಗಿದೆ.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು