ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ಹನಿ ನೀರಾವರಿ ಸಹಾಯಧನಕ್ಕೆ ಅರ್ಜಿ ಆಹ್ವಾನ

Written by Mahesh Hindlemane

Published on:

HOSANAGARA ; 2024-25ನೇ ಸಾಲಿಗೆ ಹನಿ ನೀರಾವರಿ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ಅರ್ಹ ಫಲಾನುಭವಿಗಳಿಂದ ಅಡಿಕೆ ಹಾಗೂ ಇನ್ನಿತರೆ ತೋಟಗಾರಿಕೆ ಬೆಳೆಗಳಿಗೆ (ಕಾಫಿ, ಟೀ, ರಬ್ಬರ್ ಹೊರತುಪಡಿಸಿ) ಹನಿ ನೀರಾವರಿ ಅಳವಡಿಸಿಕೊಳ್ಳಲು ಇಲಾಖೆಯ ನಿಯಮಾನುಸಾರ ಶೇ.90 ರಷ್ಟು ಸಹಾಯ ಧನವನ್ನು ನೀಡಲು ಅರ್ಜಿ ಆಹ್ವಾನಿಸಿದೆ.

WhatsApp Group Join Now
Telegram Group Join Now
Instagram Group Join Now

ಈ ಯೋಜನೆಗಳ ಲಾಭ ಪಡೆಯಲು ಇಚ್ಚಿಸುವ ರೈತರು ಹೊಸನಗರ ತಾಲ್ಲೂಕಿನ ತೋಟಗಾರಿಕೆ ಇಲಾಖೆಯಲ್ಲಿ ಅಕ್ಟೋಬರ್ 15 ರೊಳಗೆ ಅರ್ಜಿಗಳನ್ನು ಸಲ್ಲಿಸಲು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ ಅಥವಾ ಈ ಕೆಳಕಂಡ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಸಂಪರ್ಕಿಸಲು ಕೋರಿದೆ.

ಸಂಪರ್ಕ ಸಂಖ್ಯೆಗಳು :

  • ಕಸಬಾ, ಕೆರೆಹಳ್ಳಿ ಹೋಬಳಿ : 9481501571
  • ಹುಂಚ, ನಗರ ಹೋಬಳಿ : 6006338189

ಅರ್ಜಿ ಆಹ್ವಾನ :

THIRTHAHALLI ; 2024-25ನೇ ಸಾಲಿಗೆ ಹನಿ ನೀರಾವರಿ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ಅರ್ಹ ಫಲಾನುಭವಿಗಳಿಂದ ಅಡಿಕೆ ಹಾಗೂ ಇನ್ನಿತರೆ ತೋಟಗಾರಿಕೆ ಬೆಳೆಗಳಿಗೆ (ಕಾಫಿ, ಟೀ, ರಬ್ಬರ್ ಹೊರತುಪಡಿಸಿ) ಹನಿ ನೀರಾವರಿ ಅಳವಡಿಸಿಕೊಳ್ಳಲು ಇಲಾಖೆಯ ನಿಯಮಾನುಸಾರ ಶೇ.90ರಷ್ಟು ಸಹಾಯ ಧನವನ್ನು ನೀಡಲು ಅರ್ಜಿ ಆಹ್ವಾನಿಸಿದೆ.

ಈ ಯೋಜನೆಗಳ ಲಾಭ ಪಡೆಯಲು ಇಚ್ಚಿಸುವ ರೈತರು ತೀರ್ಥಹಳ್ಳಿ ತಾಲ್ಲೂಕಿನ ತೋಟಗಾರಿಕೆ ಇಲಾಖೆಯಲ್ಲಿ ಸೆ.30ರೊಳಗೆ ಅರ್ಜಿಗಳನ್ನು ಸಲ್ಲಿಸಲು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ ಸಂಪರ್ಕಿಸಬಹುದು.

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment