Soraba ; ಪಟ್ಟಣ ಸೇರಿ ಸುತ್ತಲಿನ ಪ್ರದೇಶದಲ್ಲಿ ಮಲಯಾಳಿ ಭಾಷಿಕರು ತಿರು ಓಣಂ (Onam) ಹಬ್ಬವನ್ನು ಭಾನುವಾರ ಸಂಭ್ರಮದಿಂದ ಆಚರಿಸಿದರು.
ಮಳೆಗಾಲ ಮುಗಿಯುವ ಹೊತ್ತಿನಲ್ಲಿ ಆರಂಭವಾಗುವ ಓಣಂ ಸಂದರ್ಭದಲ್ಲಿ ಕೃಷಿಕರ ಮೊದಲ ಬೆಳೆ ಕೊಯ್ಲಿಗೆ ಸಿದ್ಧವಾಗುತ್ತಿದೆ. ಕೃಷಿಗೆ ಸಂಬಂಧಿಸಿದಂತೆ ಮೊದಲ ಬೆಳೆಯ ಸಂಭ್ರಮದ ಹಬ್ಬವೂ ಆಗಿದೆ.
ಮಹಾದಾನಿ ಮಹಾಬಲಿ ಚಕ್ರವರ್ತಿ ವರ್ಷಕ್ಕೊಮ್ಮೆ ಸಿಂಹಮಾಸದ ಶ್ರಾವಣ ನಕ್ಷತ್ರದಂದು ಭೂಲೋಕಕ್ಕೆ ಬರುತ್ತಾನೆ ಎಂಬ ನಂಬಿಕೆ ಕೇರಳಿಗರಲ್ಲಿ ಇದೆ. ಈ ಕಾರಣದಿಂದಲೂ ಹಬ್ಬ ಪ್ರಾಮುಖ್ಯತೆ ಪಡೆದಿದೆ.
ಹೊಸ ಉಡುಗೆ, ತೊಡುಗೆ ತೊಟ್ಟ ಮಹಿಳೆಯರು, ಮಕ್ಕಳು ಒಟ್ಟಿಗೆ ಸೇರಿ ತಮ್ಮ ಮನೆಯಂಗಳದಲ್ಲಿ ಓಣಂ ಹಬ್ಬದ ವೈಶಿಷ್ಟ್ಯ ಎನಿಸಿದ ಹೂವಿನ ರಂಗೋಲಿ (ಪೊಳಕಂ) ಬಿಡಿಸಿದ್ದು ಗಮನ ಸೆಳೆಯಿತು.
ಮನೆಯಂಗಳವನ್ನು ಸಿಂಗರಿಸಿದ ಮಹಿಳೆಯರು ಕೇರಳದ ಸಂಸ್ಕೃತಿ ಪ್ರತಿಬಿಂಬಿಸುವ ಸಾಂಪ್ರದಾಯಿಕ ಸೀರೆ ಧರಿಸಿ ಹೂವಿನ ರಂಗೋಲಿಗೆ ದೀಪವನ್ನು ಬೆಳಗಿದರು. ನಂತರ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಹಬ್ಬಕ್ಕಾಗಿ ತಯಾರಿಸಿದ್ದ ವಿಶೇಷ ಭೋಜನವನ್ನು ಎಲ್ಲರೂ ಸೇರಿ ಸವಿದರು.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 4, 2025ಅಮ್ಮನಘಟ್ಟ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ; ದೇವಸ್ಥಾನದಲ್ಲಿ ಜಾತಿ ಭೇದ ಭಾವನೆ ಬೇಡ
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ