RIPPONPETE ; ಶ್ರದ್ಧಾ ಭಕ್ತಿಯಿಂದ ದೇವರ-ದೇವತಾ ಪೂಜಾ ವಿಧಿ-ವಿಧಾನಗಳಲ್ಲಿ ಪಾಲ್ಗೊಳ್ಳುವುದು ನೈಜ ಆಧ್ಯಾತ್ಮಕ ಉಪಾಸನೆ ಎಂದು ಅತಿಶಯ ಶ್ರೀಕ್ಷೇತ್ರ ಹೊಂಬುಜ ಜೈನ ಮಠದ ಪೀಠಾಧೀಶರಾದ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಪೂರ್ವ ಜಿನಾಗಮ ಪರಂಪರಾನುಗತ ಶ್ರೀ ಶರನ್ನವರಾತ್ರಿ ಪೂಜಾ ವಿಧಿಯಂತೆ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಘಟಸ್ಥಾಪನೆಯ ಬಳಿಕ ಪ್ರವಚನದಲ್ಲಿ ತಿಳಿಸಿ, ಭಕ್ತವೃಂದದವರ ಪ್ರಾರ್ಥನೆಯ ಫಲಾಪೇಕ್ಷೆಯನ್ನು ದೇವರು ಕರುಣಿಸಲಿ ಎಂದು ಶುಭಾಶೀರ್ವಾದ ನೀಡಿದರು.
ರಿಪ್ಪನ್ಪೇಟೆ ಸಮೀಪದ ಹೊಂಬುಜ ಜೈನ ಮಠದಲ್ಲಿ ಆಯೋಜಿಸಲಾದ ಶರನ್ನವರಾತ್ರಿ ಪ್ರಥಮದಿನದ ಪೂಜೆಗೆ ಚಾಲನೆ ನೀಡಿ ಪ್ರಾತಃಕಾಲದಲ್ಲಿ ಕುಮಧ್ವತಿ ತೀರ್ಥದಿಂದ ಅಗ್ರೋದಕವನ್ನು ಗಜರಾಣಿ ಐಶ್ವರ್ಯ, ವಾದ್ಯಗೋಷ್ಠಿ, ಜಯಘೋಷಗಳೊಂದಿಗೆ ಸಾಲಂಕೃತ ಮೆರವಣಿಗೆಯಲ್ಲಿ ಶ್ರೀಕ್ಷೇತ್ರದ ಸಾನಿಧ್ಯಕ್ಕೆ ತರಲಾಯಿತು. ಶ್ರೀ ನೇಮಿನಾಥ ಸ್ವಾಮಿ, ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಶ್ರೀ ಆದಿನಾಥ ಸ್ವಾಮಿ, ಶ್ರೀ ಮಹಾವೀರ ಸ್ವಾಮಿ, ಶ್ರೀ ಕೂಷ್ಮಾಂಡಿನಿ ದೇವಿ, ಶ್ರೀ ಸರಸ್ವತಿ ದೇವಿ, ಶ್ರೀ ಕ್ಷೇತ್ರಪಾಲ ಸ್ವಾಮಿ ಸಾನಿಧ್ಯದಲ್ಲಿ ಪೂಜಾ ವಿಧಿ ನೆರವೇರಿಸಲಾಯಿತು. ಅರ್ಯಿಕ ರತ್ನ ಶ್ರೀ 105 ಶಿವಮತಿ ಮಾತಾಜಿ ಪೂಜಾ ವಿಧಿಗಳಲ್ಲಿ ಉಪಸ್ಥಿತರಿದ್ದರು.

ಅಭೀಷ್ಠವರಪ್ರದಾಯಿನಿ ಯಕ್ಷಿ ಶ್ರೀ ಪದ್ಮಾವತಿ ದೇವಿ ಶೋಭಿತಳಾಗಿ, ಸ್ವರ್ಣರಜತ ಆಭರಣಗಳಿಂದ ಭಕ್ತರ ಕಣ್ಮನ ಸೆಳೆಯುವಂತೆ ಪುಷ್ಪ-ಫಲಗಳಿಂದ ಅಲಂಕಾರ ಮಾಡಲಾಗಿತ್ತು. ಅಷ್ಟವಿಧಾರ್ಚನೆಯನ್ನು ಭಕ್ತರ ಜಿನಭಜನೆ ವಾದ್ಯಗೋಷ್ಠಿಯೊಂದಿಗೆ ನೆರವೇರಿಸಲಾಯಿತು. ರಾತ್ರಿ ಅಷ್ಟವಧಾನದ ಮೂಲಕ ಜಿನಾಲಯದ ಪ್ರದಕ್ಷಿಣಾ ಪಥದಲ್ಲಿ ಉತ್ಸವಗಳಲ್ಲಿ ಭಕ್ತರು ಭಾಗಿಯಾದರು. ಊರ ಪರವೂರ ಭಕ್ತರು, ಶ್ರೀ ಪದ್ಮಾವತಿ ಮಹಿಳಾ ಮಂಡಲದ ಸದಸ್ಯೆಯರು ಇದ್ದರು.
ಆಕರ್ಷಕ ದೀಪಾಲಂಕಾರ ಗಮನ ಸೆಳೆಯುವಂತಿತ್ತು. ಪೂಜ್ಯ ಸ್ವಾಮೀಜಿಯವರು ಶ್ರೀ ಮಂತ್ರಾಕ್ಷತೆ ನೀಡಿ ಹರಸಿದರು.
ಅ.09 ಬುಧವಾರ-ಸರಸ್ವತಿ ಪೂಜೆ, ಅ. 10 ಗುರುವಾರ-ಜೀವದಯಾಷ್ಟಮಿ, ಅ. 11 ಶುಕ್ರವಾರ-ಆಯುಧಪೂಜೆ, ಅ. 12 ಶನಿವಾರ-ವಿಜಯದಶಮಿ ಉತ್ಸವ, ಶ್ರೀದೇವಿ ಪಲ್ಲಕ್ಕಿ ಉತ್ಸವ, ಪರಮಪೂಜ್ಯ ಸ್ವಸ್ತಿಶ್ರೀಗಳವರ ಸಿಂಹಾಸನಾರೋಹಣ ಹಾಗೂ ಶ್ರೀಗಳವರ ಪಾದಪೂಜೆ ಕಾರ್ಯಕ್ರಮಗಳು ನೆರವೇರಲಿದೆ.
ಸರ್ವ ಭಕ್ತವೃಂದದವರು ಶರನ್ನವರಾತ್ರಿ ಪೂಜಾ ವಿಧಿಗಳಲ್ಲಿ ಪಾಲ್ಗೊಂಡು ಪುಣ್ಯಭಾಗಿಗಳಾಗುವಂತೆ ಅಪೇಕ್ಷಿಸಲಾಗಿದೆ.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು
HosanagaraJune 1, 2025ಹೊಸನಗರ ; ಜೂ. 2 ಮತ್ತು 3ಕ್ಕೆ ತಾಲೂಕಿನಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮ
Adike RateJune 1, 2025Arecanut, Black Pepper Price 31 May 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?
SagaraMay 31, 2025ಪತ್ರಕರ್ತನ ಮೇಲೆ ಹಲ್ಲೆ ಯತ್ನ, ಜೀವ ಬೆದರಿಕೆ ; ಕ್ರಮಕ್ಕೆ ಒತ್ತಾಯ