SHIVAMOGGA ; ಜಿಲ್ಲೆಯಾದ್ಯಂತ ದಸರಾ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ನವರಾತ್ರಿ ಉತ್ಸವದ ಭಾಗವಾಗಿ ಆಯುಧಪೂಜೆ ಮತ್ತು ವಿಜಯದಶಮಿ ಆಚರಣೆಗೆ ಜನರು ಸಜ್ಜುಗೊಂಡಿದ್ದು, ಪೂಜೆಗೆ ಬೇಕಾದ ಸಾಮಗ್ರಿಗಳ ಖರೀದಿ ಭರಾಟೆ ಜೋರಿದೆ.

ಶಿವಮೊಗ್ಗ ನಗರದಲ್ಲಿ ಹಿಂಗಾರು ಹಂಗಾಮು ಮಳೆಯ ಕಿರಿಕಿರಿಯ ನಡುವೆಯೂ ನಾಡಹಬ್ಬ ದಸರಾಕ್ಕೆ ಕಳೆಕಟ್ಟಿದೆ. ಈಗಾಗಲೇ ಅಂತಿಮ ಸುತ್ತಿನ ಸಿದ್ಧತೆಗಳು ನಡೆದಿದ್ದು, ಆಯುಧಪೂಜೆ ಹಾಗೂ ವಿಜಯದಶಮಿ ಅಂಗವಾಗಿ ಮಾರುಕಟ್ಟೆಯಲ್ಲಿ ಹೂವು, ಹಣ್ಣು ಮತ್ತು ಇತರೆ ವಸ್ತುಗಳ ಮಾರಾಟ ಜೋರಾಗಿತ್ತು.

ಎಲ್ಲೆಡೆ ಆಯುಧ ಪೂಜೆಯ ಹಿಂದಿನ ದಿನವಾದ ಗುರವಾರ ವಾಹನಗಳು, ಯಂತ್ರೋಪಕರಣಗಳು, ಕೃಷಿ ಉಪಕರಣಗಳ ಸ್ವಚ್ಛತಾ ಕಾರ್ಯದಲ್ಲಿ ಜನರು ತೊಡಗಿದರು.
ಬೂದುಕುಂಬಳ ವ್ಯಾಪಾರ ಇಲ್ಲ :
ಆಯುಧ ಪೂಜೆ ಪ್ರಯುಕ್ತ ನಗರಕ್ಕೆ ಬೂದುಕುಂಬಳ ಕಾಯಿ ರಾಶಿ ರಾಶಿ ಬಂದಿದೆ. ಎತ್ತ ನೋಡಿದರೂ ಕುಂಬಳಕಾಯಿ ರಾಶಿ ಕಾಣಿಸುತ್ತಿತ್ತು. ಆದರೆ, ಗ್ರಾಹಕರ ಸಂಖ್ಯೆ ಕಡಿಮೆ ಇತ್ತು. ನಗರದ ಬಿ.ಎಚ್.ರಸ್ತೆ, ದುರ್ಗಿಗುಡಿ, ಪ್ರವಾಸಿ ಮಂದಿರ, ಕುವೆಂಪು ರಸ್ತೆ, ಗೋಪಿ ಸರ್ಕಲ್, ಗಾಂಧಿ ಬಜಾರ್, ವಿನೋಬನಗರ, ವಿದ್ಯಾನಗರ, ಬಿ.ಎಚ್. ರಸ್ತೆ ಹೀಗೆ ರಸ್ತೆ ಬದಿಗಳಲ್ಲಿ ಬೂದುಕುಂಬಳಕಾಯಿ ರಾಶಿ ಹಾಕಲಾಗಿದ್ದು, ಪ್ರತಿ ಕೆಜಿಗೆ 20 ರಿಂದ 30 ರೂ.ಗೆ ಕುಂಬಳ ಮಾರಾಟವಾಗುತ್ತಿದೆ.

ನಾಳೆ ಆಯುಧ ಪೂಜೆ, ಭರದ ಸಿದ್ಧತೆ ತಾಲ್ಲೂಕಿನ ವಿವಿಧೆಡೆಯಿಂದ ಬಂದಿದ್ದ ಜನರು ವಿವಿಧ ಅಂಗಡಿಗಳ ಪೂಜೆ, ದಿನಸಿ ಅಂಗಡಿ, ಕಾರ್ಖಾನೆ, ವಾಹನಗಳ ಪೂಜೆಗಾಗಿ ಬೂದುಕುಂಬಳ ಕಾಯಿಯನ್ನು ಖರೀದಿಸಿದರು.
ನಮ್ಮಲ್ಲಿ ಕೆಲವರು ಈ ಕಾಯಿಯನ್ನು ಬೆಳೆಯುವವರಿದ್ದಾರೆ. ಆದರೆ, ನಾವು ರೈತರಿಂದ ಖರೀದಿಸಿ ತಂದು ಮಾರಾಟ ಮಾಡುತ್ತಿದ್ದೇವೆ. ಈ ಬಾರಿ ನಿರೀಕ್ಷೆಗಿಂತ ಹೆಚ್ಚು ಕಾಯಿ ಮಾರುಕಟ್ಟೆಗೆ ಬಂದಿದೆ. ಕಾಯಿ ಕೇಳುವವರೇ ಇಲ್ಲ. ಕಡಿಮೆ ಬೆಲೆಗೆ ಕೇಳುತ್ತಾರೆ. ತಂದಿರುವ ಕಾಯಿ ಮಾರಿದರೆ ಸಾಕು. ಕೊನೆಯ ಪಕ್ಷ ಬಾಡಿಗೆ ಹಾಗೂ ಅಸಲಿನ ದುಡ್ಡು ಹುಟ್ಟಿದರೆ ಸಾಕು ಎನ್ನುವಂತಾಗಿದೆ.
– ಪರಶುರಾಮಪ್ಪ, ವ್ಯಾಪಾರಿ

ನಿಂಬೆ ಹಣ್ಣು ಹಾಗೂ ಇತರ ಹೂ, ಹಣ್ಣುಗಳ ಬೆಲೆ ಈ ಬಾರಿ ಹೆಚ್ಚಳವಾಗಿದ್ದು, ಚೆಂಡು ಹೂವಿಗೆ ಮಾರಿಗೆ 60 ರಿಂದ 100 ರವರೆಗೆ ಇದೆ. ಇತರ ಸೇವಂತಿಗೆ, ಜಾಜಿ, ಮತ್ತು ಕಾಕಡ ಮಾರಿಗೆ 170 ರಿಂದ 250 ರವರೆಗೆ ಇದೆ. ಬಿಡಿ ಹೂವುಗಳು ಕೆಜಿ.400 ರೂ. ಗಡಿ ದಾಟಿದೆ. ಸೇಬು,ಬಾಳೆಹಣ್ಣು, ಮುಸುಂಬಿ ಎಲ್ಲಾ ರೀತಿಯ ಹಣ್ಣುಗಳು ಕೂಡ ಏರಿಕೆಯಾಗಿವೆ. ನಾಳೆ ಆಯುಧಪೂಜೆಯಿದ್ದು, ಗ್ರಾಹಕರು ಖರೀದಿ ಭರಾಟೆಯಲ್ಲಿ ತೊಡಗಿದ್ದಾರೆ.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು
HosanagaraJune 1, 2025ಹೊಸನಗರ ; ಜೂ. 2 ಮತ್ತು 3ಕ್ಕೆ ತಾಲೂಕಿನಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮ
Adike RateJune 1, 2025Arecanut, Black Pepper Price 31 May 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?