Ripponpete ಶಿವಮೊಗ್ಗ

ಮ.ಟೈ. ವರದಿ ಫಲಶೃತಿ ; ಅಕ್ರಮ ಭೂ ಒತ್ತುವರಿ ತೆರವಿಗೆ ಮುಂದಾದ ಕಂದಾಯ ಇಲಾಖೆ ಅಧಿಕಾರಿಗಳು

RIPPONPETE ; ಹುಂಚ ಹೋಬಳಿ ಬಿದರಹಳ್ಳಿ ಗ್ರಾಮದ ಸ.ನಂ. 47 ರಲ್ಲಿ ಅಕ್ರಮವಾಗಿ ಭೂ ಒತ್ತುವರಿ ಮಾಡುವ ಮೂಲಕ ಲಕ್ಷಾಂತರ ರೂ. ಮೌಲ್ಯದ ಮರಗಳ ಮಾರಣ ಹೋಮ ಮಾಡಲಾಗಿದೆ ಎಂಬ ಬಗ್ಗೆ ಮ.ಟೈ. ನಲ್ಲಿ ಪ್ರಕಟವಾದ ವರದಿಯನ್ನಾದರಿಸಿ ಕಂದಾಯ ಇಲಾಖೆಯ ಅಧಿಕಾರಿಗಳು ತೆರವುಗೊಳಿಸುವುದರೊಂದಿಗೆ ಮಂಡ್ಲಿಕಾನ್ ಪ್ರದೇಶದ ರಕ್ಷಣೆಗೆ ಮುಂದಾಗಿದ್ದಾರೆ.

ಕಳೆದ ಸೆ. 25 ರಂದು ಮ.ಟೈ.ನಲ್ಲಿ ಪ್ರಕಟಗೊಂಡ ಸಮಗ್ರ ವರದಿಯನ್ನಾದರಿಸಿ ಪೊಲೀಸ್ ಇಲಾಖೆಯ ನೆರವಿನೊಂದಿಗೆ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್‌ರವರ ಆದೇಶದಂತೆ ಅಕ್ರಮ ಒತ್ತುವರಿ ಪ್ರದೇಶಕ್ಕೆ ಹುಂಚ ರೆವಿನ್ಯೂ ಇನ್ಸ್‌ಪೆಕ್ಟರ್ ಸೈಯದ್ ಅಫ್ರೋಜ್ ಅಹಮ್ಮದ್ ನೇತೃತ್ವದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿವರ್ಗ ತೆರಳಿ ಒತ್ತುವರಿ ಜಾಗಕ್ಕೆ ಅಳವಡಿಸಲಾದ ಬೇಲಿ ತೆರವುಗೊಳಿಸಿ ಹಾಕಲಾದ ತೆಂಗಿನ ಗಿಡಗಳನ್ನು ಕಿತ್ತು ಜೆಸಿಬಿ ಯಂತ್ರದ ಮೂಲಕ ಟ್ರಂಚ್ ಹೊಡಸಿ ಇನ್ನೂ ಮುಂದೆ ಈ ಜಾಗವನ್ನು ಯಾರು ಅಕ್ರಮವಾಗಿ ಪ್ರವೇಶಿಸದಂತೆ ಮಾಡಲಾಗಿದೆ.

img-20241022-wa00094513384685484394154.jpg

ತೆರವು ಕಾರ್ಯಾಚರಣೆಯಲ್ಲಿ ಗ್ರಾಮಾಡಳಿತಾಧಿಕಾರಿ ಶ್ರೀವಲ್ಲಿ, ಪಿಎಸ್‌ಐ ಪ್ರವೀಣ್‌ಕುಮಾರ್, ಡಿಆರ್‌ಎಫ್‌ಓ ಮಂಜುನಾಥ, ಅರಣ್ಯ ರಕ್ಷಕ ಸಂತೋಷ್ ಕುಮಾರ, ಕಂದಾಯ ಇಲಾಖೆಯ ಸಿಬ್ಬಂದಿಗಳಾದ ದರ್ಶನ, ರಾಘವೇಂದ್ರ, ನಾಗರಾಜ ಇನ್ನಿತರರು ಹಾಜರಿದ್ದರು.

Leave a Comment