RIPPONPETE ; ಪ್ರಾಚೀನ ಪ್ರಾಕೃತ ಭಾಷೆಗೆ ಕೇಂದ್ರ ಸರಕಾರವು ಶಾಸ್ತ್ರೀಯ ಭಾಷೆಯೆಂದು ಮನ್ನಣೆ-ಮಾನ್ಯತೆ ನೀಡಿರುವುದಕ್ಕಾಗಿ ಭಾರತದ ಪ್ರಧಾನಿ ಗೌರವಾನ್ವಿತ ನರೇಂದ್ರ ಮೋದಿಯವರಿಗೆ ಹೊಂಬುಜ ಅತಿಶಯ ಶ್ರೀಕ್ಷೇತ್ರದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು ಹೃತ್ಪೂರ್ವಕ ಅಭಿನಂದನೆಯನ್ನು ಸಲ್ಲಿಸಿರುವರು.

“ಜೈನ ಶಾಸ್ತ್ರದ ಸಿದ್ಧಾಂತ ತತ್ವ ಗ್ರಂಥಗಳೆಲ್ಲವೂ ಪ್ರಾಕೃತ ಭಾಷೆಯಲ್ಲಿದ್ದು, ಜೈನ ಸಮಾಜದ ವತಿಯಿಂದ ಪ್ರಾಕೃತ ವಿದ್ವಾಂಸರು ರಾಷ್ಟ್ರದಲ್ಲಿ ಶಾಸ್ತ್ರೀಯ ಭಾಷೆಯ ಅಧೀಕೃತ ಮಾನ್ಯತೆ ನೀಡಿರುವುದಕ್ಕಾಗಿ ಸಂತಸಗೊಂಡಿರುವರು ಎಂದು ತಿಳಿಸುತ್ತಾ ಪ್ರಾಕೃತ ಭಾಷೆಯ ಸಂಶೋಧನೆ, ಅಧ್ಯಯನಕ್ಕಾಗಿ ಕೇಂದ್ರ ಸರ್ಕಾರವು ಪ್ರೇರಣೆ ನೀಡಿರುವುದು ಶ್ಲಾಘನೀಯ” ಎಂದರು.

ಪ್ರಾಕೃತ ವಿದ್ವಾಂಸರಾದ ಪುಣೆಯ ಡಾ. ಕೆ.ಕೆ. ಜೈನ್, ಡಾ.ಶ್ರವಣಬೆಳಗೊಳದ ಎನ್. ಸುರೇಶ್ ಕುಮಾರ್, ಡಾ. ಜ್ವಾಲಾ ಸುರೇಶ್, ಡಾ. ರಮೇಶ ಪಾಟೀಲ, ಡಾ. ಮಹಾವೀರ ಶಾಸ್ತ್ರಿ ಮತ್ತಿತರ ವಿದ್ವಾಂಸರು ಉಪಸ್ಥಿತರಿದ್ದರು.

Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
HosanagaraJune 5, 2025ಹೊಸನಗರ ಪ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿಗಾಗಿ ಪರದಾಟ…!
RipponpeteJune 4, 2025ಅಮ್ಮನಘಟ್ಟ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ; ದೇವಸ್ಥಾನದಲ್ಲಿ ಜಾತಿ ಭೇದ ಭಾವನೆ ಬೇಡ
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ