RIPPONPETE ; ಇಲ್ಲಿನ ಕಸ್ತೂರಿ ಕನ್ನಡ ಸಂಘ ಹಾಗೂ ಡಾ.ಪುನೀತ್ರಾಜ್ ಅಭಿಮಾನಿ ಬಳಗದವರಿಂದ ಮೂರನೇ ವರ್ಷದ ಡಾ.ಪುನೀತ್ ಪುಣ್ಯಸ್ಮರಣೆ ಕಾರ್ಯಕ್ರಮವು ವಿನಾಯಕ ವೃತ್ತದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.
ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಡಾ.ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆಯೊಂದಿಗೆ ಪುಷ್ಪನಮನ ಸಲ್ಲಿಸಿ ನಂತರ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿ, ಪುನೀತ್ ರಾಜ್ಕುಮಾರ್ ಚಿತ್ರರಂಗಕ್ಕೆ ಸೀಮಿತವಾಗದೆ ಸಾಮಾಜಿಕ ಕ್ಷೇತ್ರದಲ್ಲಿ ನೂರಾರು ಮಾನವೀಯ ಸೇವೆಗಳನ್ನು ಮಾಡುವ ಮೂಲಕ ಜನರ ಅಂತರಾತ್ಮದಲ್ಲಿ ನೆಲೆಸಿದ್ದಾರೆ. ಅವರು ಕೋಟ್ಯಂತರ ಅಭಿಮಾನಿಗಳನ್ನು ಬಿಟ್ಟು ಅಗಲಿರಬಹುದು ಅವರು ನೀಡಿದ ಮೌಲ್ಯಭರಿತ ಕೊಡುಗೆ ಅಪಾರವಾಗಿವೆ. ಅವು ಎಂದೆಂದಿಗೂ ಅತ್ಯಂತ ಸ್ಮರಣೀಯವಾಗಿದ್ದು ಅಭಿಮಾನಿ ದೇವರಲ್ಲಿ ಶಾಶ್ವತವಾಗಿ ಉಳಿಯುವಂತಾಗಿವೆ ಎಂಬುದಕ್ಕೆ ಇಂದಿನ ಪುಣ್ಯಸ್ಮರಣೆಯಲ್ಲಿ ಸೇರಿರುವ ಅಭಿಮಾನಿಗಳೇ ಸಾಕ್ಷಿಯಾಗಿದೆ ಎಂದರು.

ಡಾ.ಪುನೀತ್ರಾಜ್ ಅಭಿಮಾನಿ ಬಳಗದ ಅಧ್ಯಕ್ಷ ನಿರಂಜನ ಅಧ್ಯಕ್ಷತೆ ವಹಿಸಿದ್ದರು.
ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಧನಲಕ್ಷ್ಮಿ, ಜಿಲ್ಲಾ ಪಂಚಾಯಿತ್ ಮಾಜಿ ಸದಸ್ಯ ಬಂಡಿ ರಾಮಚಂದ್ರ, ಸಂಘದ ಜಿ.ಎಸ್.ವರದರಾಜ್, ಸದಸ್ಯರಾದ ಆರ್.ಎ.ಚಾಬುಸಾಬ್, ಮೆಣಸೆ ಆನಂದ್, ನಿರ್ಮಲ, ಲೇಖನ, ಹಸನಬ,ರಮೇಶ್ ಫ್ಯಾನ್ಸಿ, ಶ್ರೀಧರ, ಉಲ್ಲಾಸ, ಗಣಪತಿ ಗವಟೂರು. ಹೆಚ್.ಎನ್.ಉಮೇಶ್, ವೇದಾ, ಆರ್.ಡಿ.ಶೀಲಾ, ಡಿ.ಈ.ಮಧುಸೂದನ್, ಆಸಿಫ್, ಸಾರಾಬಿ, ಜಿ.ಡಿ.ಮಲ್ಲಿಕಾರ್ಜುನ, ಪಿಎಸ್ಐ ಪ್ರವೀಣ್ ಕುಮಾರ್, ಪ್ರಕಾಶ ಪಾಲೇಕರ್, ಮಂಜುನಾಥ ಕಾಮತ್, ಕಲಾಕೌಸ್ತುಭ ಕನ್ನಡ ಸಂಘದ ಅಧ್ಯಕ್ಷ ರವೀಂದ್ರ ಕೆರೆಹಳ್ಳಿ, ಶ್ವೇತಾ, ಯೋಗೇಂದ್ರಪ್ಪಗೌಡ, ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್ ಅಭಿಮಾನಿ ಬಳಗ ಹಾಗೂ ಕಲಾಕೌಸ್ತುಭ ಕನ್ನಡ ಸಂಘದ ಪದಾಧಿಕಾರಿಗಳು ಹಾಜರಿದ್ದರು.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು
HosanagaraJune 1, 2025ಹೊಸನಗರ ; ಜೂ. 2 ಮತ್ತು 3ಕ್ಕೆ ತಾಲೂಕಿನಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮ