THIRTHAHALLI ; ಶಿವಮೊಗ್ಗದ ನೆಹರು ಸ್ಟೇಡಿಯಂನಲ್ಲಿ ಅಕ್ಟೋಬರ್ 26 ಮತ್ತು 27 ರಂದು ನಡೆದ 14 ಮತ್ತು 17 ವರ್ಷದ ವಯೋಮಿತಿಯೊಳಗಿನ ವಿಭಾಗದ ಸಮಗ್ರ ಪ್ರಶಸ್ತಿ ಲಭಿಸಿದೆ.
14 ವರ್ಷ ವಯೋಮಿತಿಯೊಳಗಿನ ಬಾಲಕರ ವಿಭಾಗದಲ್ಲಿ 3 ಪ್ರಥಮ ಸ್ಥಾನ, 3 ದ್ವಿತೀಯ ಸ್ಥಾನ, 2 ತೃತೀಯ ಸ್ಥಾನ ಲಭಿಸಿದೆ. ಬಾಲಕಿಯರ ವಿಭಾಗದಲ್ಲಿ 4 ಪ್ರಥಮ ಸ್ಥಾನ, 5 ದ್ವಿತೀಯ ಸ್ಥಾನ, 3 ತೃತೀಯ ಸ್ಥಾನ ಪಡೆದಿದ್ದಾರೆ.

17 ವರ್ಷ ವಯೋಮಿತಿಯೊಳಗಿನ ಬಾಲಕರ ವಿಭಾಗದಲ್ಲಿ 3 ಪ್ರಥಮ ಸ್ಥಾನ, 3 ದ್ವಿತೀಯ ಸ್ಥಾನ, 5 ತೃತೀಯ ಸ್ಥಾನ. ಬಾಲಕಿಯರ ವಿಭಾಗದಲ್ಲಿ 1 ಪ್ರಥಮ ಸ್ಥಾನ, 3 ದ್ವಿತೀಯ ಸ್ಥಾನ, 2 ತೃತೀಯ ಸ್ಥಾನ ಪಡೆದಿದ್ದಾರೆ. ವಾಲಿಬಾಲ್ ನಲ್ಲಿ 17 ಮತ್ತು 14 ವರ್ಷ ವಯೋಮಿತಿಯ ಬಾಲಕರು ದ್ವಿತೀಯ ಸ್ಥಾನ ಪಡೆದಿದ್ದಾರೆ.

ವಿಜೇತ ವಿದ್ಯಾರ್ಥಿಗಳನ್ನು ಶಾಲೆಯ ಪ್ರಾಂಶುಪಾಲ ಕೆ.ಎಸ್.ವಾಸುದೇವ, ಆಡಳಿತ ಮಂಡಳಿ ಅಭಿನಂದಿಸಿದೆ. ಈ ಸಂದರ್ಭದಲ್ಲಿ ಶಿಕ್ಷಕ ಎಚ್.ವಿ.ಮುರಳೀಧರ, ದೈಹಿಕ ಶಿಕ್ಷಕರಾದ ಎಚ್.ಬಿ.ರಜಿತ್ ಕುಮಾರ್, ದರ್ಶನ್ ಇದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.