ಎಂ. ಗುಡ್ಡೇಕೊಪ್ಪ ಗ್ರಾ.ಪಂ. ಉಪಚುನಾವಣೆ ; ಕಳೂರು ವಾರ್ಡ್‌ಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಶಶಿಕಲಾ ನಾಮಪತ್ರ ಸಲ್ಲಿಕೆ

Written by Mahesh Hindlemane

Updated on:

HOSANAGARA | ಇದೇ 23ಕ್ಕೆ ತಾಲೂಕಿನ ಎಂ‌.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಳೂರು ವಾರ್ಡ್‌ಗೆ ತೆರುವಾಗಿದ್ದ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದ್ದು ಶಶಿಕಲಾ ಸೋಮವಾರ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

WhatsApp Group Join Now
Telegram Group Join Now
Instagram Group Join Now

ಚುನಾವಣಾ ನೋಡಲ್ ಅಧಿಕಾರಿಯಾದ ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಪುಟ್ಟನಾಯ್ಕ ಅವರು ಅಭ್ಯರ್ಥಿ ಶಶಿಕಲಾ ಅವರಿಂದ ನಾಮಪತ್ರ ಪಡೆದರು.

ಈ ವೇಳೆ ಕಾಂಗ್ರೆಸ್ ಹೊಸನಗರ ಟೌನ್ ಘಟಕದ ಅಧ್ಯಕ್ಷ ಕೆ.ಎಸ್.ಗುರುರಾಜ್, ಗ್ರಾಮ ಪಂಚಾಯತಿ ಸದಸ್ಯ ಮಹೇಂದ್ರ, ದಿವ್ಯ ಪ್ರವೀಣ್, ಬೇಕರಿ ಪ್ರವೀಣ್, ಬಾಬಣ್ಣ, ಲೋಕೇಶ್ ಮಂಡಾನಿ, ಉಬೇದ್ ಸಾಬ್, ಟಾಕಪ್ಪ, ಕಳೂರು ಕೃಷ್ಣಮೂರ್ತಿ, ಕೃಷ್ಣಶೆಟ್ಟಿ ಮೊದಲಾದವರು ಇದ್ದರು.


ಬಿಜೆಪಿ ಬೆಂಬಲಿತ ಅಭ್ಯರ್ಥಿ ನಿರ್ಮಲಾ ರಾಘವೇಂದ್ರ ನಾಮಪತ್ರ ಸಲ್ಲಿಕೆ

HOSANAGARA | ಇದೇ ನ.23 ರಂದು ನಡೆಯುವ ತೆರುವಾಗಿದ್ದ ಎಂ.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿಯ ಕಳೂರು ವಾರ್ಡ್‌ನ ಸದಸ್ಯ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ನಿರ್ಮಲಾ ರಾಘವೇಂದ್ರ ಇಂದು ಚುನಾವಣಾ ನೋಡಲ್ ಅಧಿಕಾರಿ ಪುಟ್ಟನಾಯ್ಕ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಂ.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ಅಧ್ಯಕ್ಷ ಜೆ.ಎನ್. ಪ್ರವೀಣ್ ಸದಸ್ಯರಾದ ಕಾಲ್ಸಸಿ ಸತೀಶ್, ನೇರ್ಲೆ ರಮೇಶ್, ಸವಿತಾ ರಮೇಶ್ ಸೇರಿದಂತೆ ಹಲವರು ಇದ್ದರು.

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment