RIPPONPETE ; ಹೊಸನಗರ – ರಿಪ್ಪನ್ಪೇಟೆ ಮಾರ್ಗದ ಹಿರೇಜೇನಿ ಎಂಬಲ್ಲಿ ಮಧ್ಯಾಹ್ನ 2.30 ರ ಸುಮಾರಿಗೆ ಶಿವಮೊಗ್ಗ ಕಡೆಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ದುರ್ಗಾಂಬಾ ಖಾಸಗಿ ಬಸ್ ಎದುರುಗಡೆಯಿಂದ ಬಂದ ಲಾರಿಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ನಡೆದಿದೆ.

ಬಸ್ ಉರುಳಿದ ಸಮೀಪವೇ ವಿದ್ಯುತ್ ಕಂಬವಿದ್ದು ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತವೊಂದು ತಪ್ಪಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಸಣ್ಣ-ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರಾಗಿದ್ದಾರೆ.

ರಿಪ್ಪನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.