ನಾಪತ್ತೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವವಾಗಿ ತುಂಗಾ ನದಿಯಲ್ಲಿ ಪತ್ತೆ !

Written by Mahesha Hindlemane

Published on:

THIRTHAHALLI ; ನಾಪತ್ತೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವ ತುಂಗಾ ನದಿಯಲ್ಲಿ ಇಂದು ಪತ್ತೆಯಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ತೀರ್ಥಹಳ್ಳಿ ತಾಲೂಕಿನ ಅರಳಸುರುಳಿ ಗ್ರಾಮದ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶ್ರೀವತ್ಸ (38) ಮೃತ ಬ್ಯಾಂಕ್ ಮ್ಯಾನೇಜರ್. ಕಾಲು ಜಾರಿ ನದಿಗೆ ಬಿದ್ದರೋ ಅಥವಾ ತಾವೇ ನದಿಗೆ ಹಾರಿದ್ದಾರೆ ಎನ್ನುವ ಬಗ್ಗೆ ತನಿಖೆಯಿಂದ ತಿಳಿದುಬರಬೇಕಿದೆ.

ಮೃತ ಶ್ರೀವತ್ಸ ಆಂಧ್ರಪ್ರದೇಶದ ವಿಶಾಖಪಟ್ಟಣಂ ಮೂಲದವರು ಎಂದು ತಿಳಿದುಬಂದಿದ್ದು, ಸದ್ಯ ಅವರು ತೀರ್ಥಹಳ್ಳಿಯಲ್ಲಿ ಒಬ್ಬರೇ ವಾಸವಾಗಿದ್ದರು ಎನ್ನಲಾಗಿದೆ.

ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್, ಬಟ್ಟೆ ಬಿಟ್ಟು ಕಣ್ಮರೆಯಾಗಿದ್ದರು. ಮೊಬೈಲ್ ಆಧಾರದ ಮೇಲೆ ಬ್ಯಾಂಕ್ ಮ್ಯಾನೇಜರ್ ಎಂದು ಹೇಳಲಾಗಿತ್ತು. ನಿನ್ನೆ ತುಂಗಾ ನದಿಯಲ್ಲಿ ಅಗ್ನಿಶಾಮಕ ದಳ, ಪೊಲೀಸರು ಸಿಬ್ಬಂದಿ ತೀವ್ರ ಕಾರ್ಯಾಚರಣೆ ನಡೆಸಿದ್ದರು. ಆದರೆ ಇಂದು ಬೆಳಗ್ಗೆ ಅವರ ಶವ ಪತ್ತೆಯಾಗಿದೆ.

Leave a Comment