HOSANAGARA ; ಜನುಮಧಾತೆ, ಜನ್ಮಭೂಮಿಯಷ್ಟೇ ಮಾತೃಭಾಷೆ ಮೇಲಿನ ಪ್ರೇಮ ಕನ್ನಡ ನಾಡಿನ ಪ್ರತಿಯೊಬ್ಬ ನಾಗರೀಕನ ಜವಾಬ್ದಾರಿ ಆಗಿದೆ ಎಂದು ಮೇಲನಬೆಸಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀನಿವಾಸ ರೆಡ್ಡಿ ತಿಳಿಸಿದರು.
ತಾಲೂಕಿನ ಜಯನಗರದಲ್ಲಿ ಶ್ರೀ ವರಸಿದ್ದಿವಿನಾಯಕ ಸಂಘ, ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಸಂಯುಕ್ತ ಆಶ್ರಯದಲ್ಲಿ ನಡೆದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ತ.ಮ.ನರಸಿಂಹ ಮಾತನಾಡಿ, ವಿಶ್ವದಲ್ಲಿ ಒಟ್ಟಾರೆ ಎಂಟು ಸಾವಿರ ಭಾಷೆಗಳಿದ್ದು, ಸುಮಾರು ಎರಡು ಸಾವಿರ ಭಾಷೆಗಳನ್ನು ಅಧಿಕೃತ ಎನ್ನಲಾಗಿದ್ದು. ಅವುಗಳಲ್ಲಿ ಇಪ್ಪತ್ತು ಭಾಷೆಗಳು ವಿಶ್ವವ್ಯಾಪ್ತಿ ಮನ್ನಣೆ ಪಡೆದಿವೆ. ಅದರಲ್ಲಿ ಕನ್ನಡ ಭಾಷೆ ಸಹ ಒಂದು ಎಂಬ ಹೆಗ್ಗಳಿಕೆ ನಮ್ಮದಾಗಿದೆ ಎಂಬ ಅಭಿಮತ ವ್ಯಕ್ತಪಡಿಸಿದರು.

ಕನ್ನಡ ಸಂಘದ ಅಧ್ಯಕ್ಷ ಧರ್ಮರಾವ್ ಸೇಡಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡಿಗರು ಭಾಷಾಭಿಮಾನ ಬೆಳೆಸಿಕೊಂಡು, ಯುವಪೀಳಿಗೆಗೆ ಹಸ್ತಾಂತರಿಸುವ ಕಾಯಕದಲ್ಲಿ ತೊಡಗುವಂತೆ ಕಿವಿಮಾತು ಹೇಳಿದರು.
ಕನ್ನಡ ಸಂಘದ ಗೌರವಾಧ್ಯಕ್ಷ ಸಿ.ಎಂ. ಚಂದ್ರಮೂರ್ತಿ ಮಾತನಾಡಿ, ಇತಿಹಾಸ ಹಾಗೂ ಮಾತೃಭಾಷೆ ಒಂದಕ್ಕೊಂದು ಪೂರಕವಾದಾಗ ಮಾತ್ರವೇ ಹೊಸಬೆಳಕು ಮೂಡಲು ಸಾಧ್ಯವೆಂದರು.
ಇದೇ ಸಂದರ್ಭದಲ್ಲಿ ತಾಲೂಕಿನ ಇತಿಹಾಸಕಾರ, ಸಾಹಿತಿ ಅಂಬ್ರಯ್ಯಮಠ ಅವರನ್ನು ಸಂಘ ಆತ್ಮೀಯವಾಗಿ ಸನ್ಮಾನಿಸಿತು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ, ಉದ್ಯಮಿ ಹಾಲಗದ್ದೆ ಉಮೇಶ್, ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಅಧ್ಯಕ್ಷ ಸಾಲಗೇರಿ ಲಕ್ಷ್ಮಣ ಗೌಡ, ಶ್ರೀ ವರಸಿದ್ದಿವಿನಾಯಕ ಸಂಘದ ಅಧ್ಯಕ್ಷ ಬಿ.ಎ. ಅಕ್ಷಯ್ ಕುಮಾರ್, ಕನ್ನಡ ರಾಜ್ಯೋತ್ಸವ ಸಮಿತಿ ಅಧ್ಯಕ್ಷ ಟಿ. ಸುನೀಲ್, ಜಯನಗರ ಪ್ರಹ್ಲಾದ್, ಕಾರ್ಯದರ್ಶಿ ಶೇಟ್ ಉಪಸ್ಥಿತರಿದ್ದರು.
ನಿಶ್ಮಿತಾ ಎಸ್ ಪೂಜಾರಿ ಪ್ರಾರ್ಥಿಸಿ, ಜಯನಗರ ಗುರುಪ್ರಸಾದ್ ನಿರೂಪಿಸಿ, ಸುರೇಶ್ ಆಚಾರ್ಯ ವಂದಿಸಿದರು.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 4, 2025ಅಮ್ಮನಘಟ್ಟ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ; ದೇವಸ್ಥಾನದಲ್ಲಿ ಜಾತಿ ಭೇದ ಭಾವನೆ ಬೇಡ
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ