RIPPONPETE ; ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಡೆಗದ್ದೆ, ಬಸವಾಪುರ, ಹಾರೋಹಿತ್ತಲು, ಮಚ್ಚಲಿಜಡ್ಡು, ಕೋಣನಜಡ್ಡು, ಸುತ್ತಮುತ್ತಲಿನಲ್ಲಿ ಗ್ರಾಮಗಳಲ್ಲಿ ಮತ್ತೆ ಕಾಡಾನೆ ಕಾಣಿಸಿಕೊಂಡು ರೈತರ ಜಮೀನಿಗೆ ನುಗ್ಗಿ ಬಾಳೆ, ಅಡಿಕೆ ಬೆಳೆಯನ್ನು ನಾಶಗೊಲಿಸಿರುವ ಘಟನೆ ಎರಡ್ಮೂರು ದಿನಗಳಿಂದ ನಡೆಯುತ್ತಿದ್ದು ರೈತರ ಆತಂಕಕ್ಕೆ ಕಾರಣವಾಗಿದೆ.
ಮೇ ತಿಂಗಳಲ್ಲಿ ಬಸವಾಪುರ ಗ್ರಾಮದಲ್ಲಿ ದರಗೆಲೆ ತರಲು ಹೋದ ಕೂಲಿ ಕಾರ್ಮಿಕನನ್ನು ಬಲಿ ಪಡೆದಿದ್ದ ಆನೆಯಿಂದಾಗಿ ಈ ಭಾಗದಲ್ಲಿನ ರೈತರು ಹಗಲು, ರಾತ್ರಿ ಹೀಗೆ ಊರಿನಲ್ಲಿ ಓಡಾಡದಂತಹ ಸ್ಥಿತಿ ನಿರ್ಮಾಣವಾಗಿದ್ದು ವಿದ್ಯಾರ್ಥಿಗಳು ಸಹ ಶಾಲೆ, ಕಾಲೇಜ್ಗೆ ಬಂದು ಹೋಗುವುದೇ ಕಷ್ಟಕರವಾಗಿದೆ. ಪುನಃ ಈಗ ಮೂರ್ನಾಲ್ಕು ದಿನಗಳಿಂದ ಅಲ್ಲಲ್ಲಿ ಆನೆ ಹೊಲ-ಗದ್ದೆಗೆ ನುಗ್ಗಿ ಬಾಳೆ ಅಡಿಕೆ ಬೆಳೆಯನ್ನು ನಾಶಗೊಳಿಸಿರುವುದು ಕಂಡ ರೈತ ನಾಗರೀಕರನ್ನು ಇನ್ನೂ ಭಯಗೊಳ್ಳುವಂತೆ ಮಾಡಿದೆ.
ಇನ್ನಾದರೂ ಅರಣ್ಯ ಇಲಾಖೆ ಆನೆಯನ್ನು ಕೂಡಲೇ ಸ್ಥಳಾಂತರ ಮಾಡಿ ರೈತರ ಆತಂಕವನ್ನು ದೂರ ಮಾಡುವಂತೆ ಆಗ್ರಹಿಸಿದ್ದಾರೆ.
ನಾಗರಹಾವನ್ನು ಸುರಕ್ಷಿತವಾಗಿ ಸೆರೆಹಿಡಿದ ಉರಗ ತಜ್ಞ ಗಂಗಾಧರ
RIPPONPETE ; ಇಲ್ಲಿನ ತೀರ್ಥಹಳ್ಳಿ ರಸ್ತೆಯ ಮನೆಯೊಂದರ ಬಳಿ ಕಾಣಿಸಿಕೊಂಡ ಬೃಹತ್ ಗಾತ್ರದ ನಾಗರಹಾವನ್ನು ಉರಗ ತಜ್ಞ ಗಂಗಾಧರ ಹಿಡಿದು ಕಾಡಿಗೆ ಬಿಟ್ಟರು.

ವಾಸದ ಮನೆಯ ಬಳಿ ಕಾಣಿಸಿಕೊಂಡ ಬೃಹತ್ ಗಾತ್ರದ ನಾಗರಹಾವನ್ನು ಕಂಡ ಮಕ್ಕಳು ಭಯಭೀತರಾಗಿದ್ದು ತಕ್ಷಣ ಉರಗ ತಜ್ಞ ಗಂಗಾಧರ ಇವರನ್ನು ಕರೆಯಿಸಿ ಹಾವನ್ನು ಹಿಡಿಸಿ ಕಾಡಿಗೆ ಬಿಡುವ ಮೂಲಕ ಮಕ್ಕಳಲ್ಲಿನ ಭಯವನ್ನು ದೂರಗೊಳಿಸಿದರು.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು