HOSANAGARA ; ಇಂದು (ಡಿ. 08) ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 33 ಕೆ.ವಿ ಸಾಗರ- ಹೊಸನಗರ ಮಾರ್ಗ ನಿರ್ವಹಣೆ ಪ್ರಯುಕ್ತ ಸಾಗರದಿಂದ ಹೊಸನಗರಕ್ಕೆ ಬಂದಿರುವ ಸಾಗರ-ಹೊಸನಗರ ವಿದ್ಯುತ್ ಮಾರ್ಗದ, ಎಂ.ಗುಡ್ಡೆಕೊಪ್ಪ ಜೇನಿ, ಮಾರುತಿಪುರ, ರಾಮಚಂದ್ರಾಪುರ, ಮೇಲಿನಬೆಸಿಗೆ, ಸೊನಲೆ, ಮತ್ತು ಕೋಡೂರು ಗ್ರಾಮ ಪಂಚಾಯಿತಿ ಮತ್ತು ಹೊಸನಗರ ಟೌನ್ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿರುವುದು.
ಆದ್ದರಿಂದ ಹೊಸನಗರ ಉಪವಿಭಾಗದ ಗ್ರಾಹಕರು ಸಹಕರಿಸಬೇಕಾಗಿ ಪತ್ರಿಕಾ ಪ್ರಕಟಣೆ ಮೂಲಕ ಮೆಸ್ಕಾಂ ಇಲಾಖೆ ತಿಳಿಸಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.