HOSANAGARA ; ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷರಾಗಿ ನಾಗರಕೊಡಿಗೆ ಗಣೇಶಮೂರ್ತಿ ಅವಿರೋಧ ಆಯ್ಕೆಯಾದರು.
ಇಂದು ಪಟ್ಟಣದ ಶ್ರೀರಾಮ ಕಾಂಪ್ಲೆಕ್ಸ್ ನಲ್ಲಿ ನಡೆದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಭೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ ಮಂಜುನಾಥ್ ಸಭೆಯಲ್ಲಿ ಚಿಂತನ ಮಂಥನ ನಡೆದ ನಂತರ ನಾಗರಕೊಡಿಗೆ ಗಣೇಶಮೂರ್ತಿ ಅವರ ಹೆಸರನ್ನು ಪ್ರಕಟಿಸಿದರು.

ಈ ಸಭೆಯಲ್ಲಿ ಹಿರಿಯ ಚಿಂತಕರು ಸಾಹಿತ್ಯ ಅಭಿಮಾನಿಗಳು ಲೇಖಕರಾದ ಡಾ. ಶಾಂತರಾಮ ಪ್ರಭು, ಡಾ. ಶ್ರೀಪತಿ ಹಳಗುಂದ, ನಿಕಟಪೂರ್ವ ಅಧ್ಯಕ್ಷರುಗಳಾದ ತ.ಮ. ನರಸಿಂಹ, ಕೆ ಇಲಿಯಾಸ್, ಮಾರ್ಷಲ್ ಶರಾಂ, ಕೆ.ಕೆ ಅಶ್ವಿನಿ ಕುಮಾರ್, ಮಂಜುನಾಥ ಕಾಮತ್, ಎಂ.ಕೆ ವೆಂಕಟೇಶಮೂರ್ತಿ, ಕೆ.ಜಿ ನಾಗೇಶ್, ಕುಬೇಂದ್ರಪ್ಪ, ಜಿ.ಎನ್ ಬಸಪ್ಪಗೌಡ, ಎನ್ ವಿಜೇಂದ್ರ ಶೇಟ್, ಎಸ್.ಎಚ್ ನಿಂಗಮೂರ್ತಿ, ಎಸ್.ಎನ್ ರಾಜಮೂರ್ತಿ, ಎನ್.ವಿ ಲಲಿತಾ, ಕೆ. ಸುರೇಶ್ ಕುಮಾರ್, ಗರ್ತಿಕೆರೆ ಬಷೀರ್ ಅಹಮ್ಮದ್, ನಗರ ರಾಘವೇಂದ್ರ, ವಾಸಪ್ಪಗೌಡ, ಈಶ್ವರಪ್ಪ ಗೌಡ, ನವೀನ್ ಕುಮಾರ್, ಪ್ರಶಾಂತ ಮೊದಲಾದವರು ಉಪಸ್ಥಿತರಿದ್ದು ಸೂಕ್ತ ಸಲಹೆ ಮಾಹಿತಿ ನೀಡಿದರು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.