N.R.PURA ; ಕಾಡಾನೆ ದಾಳಿಗೆ ವ್ಯಕ್ತಿಯೋರ್ವ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮಡಬೂರು ಗ್ರಾಮದ ಸಮೀಪ ಯಕ್ಕಡಬೈಲು ಎಂಬಲ್ಲಿ ಗುರುವಾರ ನಡೆದಿದೆ.
ಮಡಬೂರು ಗ್ರಾಮದ ಕೃಷಿಕ ಕೆ.ಕೆ.ಏಲಿಯಾಸ್ (72) ಆನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ. ಮೇಯಲು ಕಾಡಿಗೆ ತೆರಳಿದ್ದ ಎಮ್ಮೆ ಬಾರದ ಹಿನ್ನೆಲೆಯಲ್ಲಿ ತಂದೆ ಮತ್ತು ಮಗ ಎಮ್ಮೆ ಹುಡುಕಿಕೊಂಡು ಕಾಡಿಗೆ ತೆರಳಿದ್ದರು. ಈ ವೇಳೆ ಆನೆ ಎದುರುಗೊಂಡಿದ್ದು ಆನೆಯನ್ನು ಕಂಡ ಮಗ ಸ್ಥಳದಿಂದ ಓಡಿ ಬಂದಿದ್ದಾನೆ. ಆದರೆ ತಂದೆ ಆನೆ ದಾಳಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನ.30 ರಂದು ಎನ್.ಆರ್.ಪುರ ತಾಲೂಕಿನ ಸೀತೂರು ಗ್ರಾಮದ ಉಮೇಶ್ ಗ್ರಾಮಕ್ಕೆ ನುಗ್ಗಿದ್ದ ಆನೆಯನ್ನು ಓಡಿಸಲು ಮುಂದಾದಾಗ ಆನೆ ತುಳಿತಕ್ಕೆ ಸಿಲುಕಿ ಮೃತಪಟ್ಟಿದ್ದರು. ಈ ಘಟನೆ ನಡೆದು 20 ದಿನ ಕಳೆದಿದ್ದು ಘಟನೆ ಮಾಸುವ ಮುನ್ನವೇ ಮಡಬೂರು ಗ್ರಾಮದ ಕೆ.ಕೆ.ಏಲಿಯಾಸ್ ಆನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ.
ಮಲೆನಾಡು ಭಾಗದಲ್ಲಿ ಆನೆಗಳ ದಾಳಿಗೆ ಕಡಿವಾಣ ಹಾಕುವಂತೆ ಇಲ್ಲಿನ ಜನರು ಆಗ್ರಹಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.