HOSANAGARA ; ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರ ಸೂಚನೆ ಮೇರೆಗೆ, ತಾಲೂಕು ಬಿಜೆಪಿ ಮುಖಂಡ ಬೆಳಗೋಡು ಗಣಪತಿ ಅವರನ್ನು ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆ ಸಚಿವರು ಶಿವಮೊಗ್ಗ ಜಿಲ್ಲಾ ದೂರವಾಣಿ ಸಲಹಾ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಬಿಎಸ್ಎನ್ಎಲ್ ಸ್ಥಿರ ದೂರವಾಣಿ, ಮೊಬೈಲ್ ಟವರ್ಗಳ ಕಾರ್ಯನಿರ್ವಹಣೆ, ಟವರ್ಗಳ ನಿರ್ಮಾಣ ಪ್ರಗತಿ ಕಾರ್ಯ, ನೆಟ್ವರ್ಕ್ ಸೇರಿದಂತೆ ದೂರವಾಣಿ ಇಲಾಖೆಗೆ ಸೇರಿದ ವಿವಿಧ ರೀತಿಯ ಸೌಲಭ್ಯಗಳನ್ನು ಸಾರ್ವಜನಿಕರಿಗೆ ಸರಿಯಾಗಿ ದೊರೆಯುವಂತೆ ಮಾಡುವುದು ಹಾಗು ಸಲಹಾ ಸಮಿತಿ ಸಭೆಗಳಲ್ಲಿ ಭಾಗವಹಿಸಿ ಸಲಹೆ, ಸಹಕಾರ, ಮಾರ್ಗದರ್ಶನ ನೀಡುವುದು ಸದಸ್ಯರ ಕರ್ತವ್ಯವಾಗಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.