ತೀರ್ಥಹಳ್ಳಿ ; ಲಕ್ಷ್ಮೀಶ್‌ ಪತ್ರಿಕೆ ಸಂಪಾದಕ ಕಾ.ಸು. ಲಕ್ಷ್ಮೀಶ್ ಇನ್ನಿಲ್ಲ !

Written by Mahesh Hindlemane

Published on:

THIRTHAHALLI ; ತನ್ನ ಮೊನಚು ಬರವಣಿಗೆಯ ಮೂಲಕ ಮನೆಮಾತಾಗಿದ್ದ ಲಕ್ಷ್ಮೀಶ್‌ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಾ.ಸು. ಲಕ್ಷ್ಮೀಶ್ (62) ಮಂಗಳವಾರ ನಿಧನರಾದರು.

WhatsApp Group Join Now
Telegram Group Join Now
Instagram Group Join Now

ಸೋಮವಾರ ರಾತ್ರಿ ಬ್ರೈನ್ ಹ್ಯಮರೇಜ್ ಆಗಿದೆ. ಕೂಡಲೇ ತೀರ್ಥಹಳ್ಳಿಯ ಕಿರಣ್ ಹೆಲ್ತ್ ಕೇರ್ ಗೆ ಕರೆತರಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ ಮೂಲಕ ಶಿವಮೊಗ್ಗ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.

ಲಕ್ಷ್ಮೀಶ್‌ ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ತೀರ್ಥಹಳ್ಳಿಯ ಬೊಬ್ಬಿ ಸಮೀಪದ ಮಾಕೋಡಿನಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಬೆಳಗ್ಗೆ ತೀರ್ಥಹಳ್ಳಿಯ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ನಡೆಯಿತು.

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment