RIPPONPETE ; ಮಸರೂರು ಮೀಸಲು ಅರಣ್ಯದಲ್ಲಿ ಲಕ್ಷಾಂತರ ರೂ. ಮೌಲ್ಯದ ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿತಲೆ ಮಾಡಿ ಸಾಗಾಣಿಕೆಗಾಗಿ ಸಿದ್ದತೆಯಲ್ಲಿದ್ದಾರೆಂಬ ಮಾಹಿತಿಯನ್ನಾದರಿಸಿ ಅರಸಾಳು ವಲಯ ಅರಣ್ಯಾಧಿಕಾರಿ ಶರಣಪ್ಪನವರ ನೇತೃತ್ವದಲ್ಲಿ ದಾಳಿ ನಡೆಸಿ ಸಾಗುವಾನಿ ಮರದ ತುಂಡುಗಳನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.
ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿತಲೆ ಮಾಡಿ ಸಾಗಾಣಿಕೆ ಮಾಡುವ ಹುನ್ನಾರದಲ್ಲಿ ತೊಡಗಿದ್ದ ಅರೋಪಿಗಳು ಪರಾರಿಯಾಗಿದ್ದು ಒಟ್ಟು 11 ಜನರ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಶರಣಪ್ಪ ತಿಳಿಸಿದ್ದಾರೆ.
ಆರೋಪಿಗಳಾದ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊನ್ನಕೊಪ್ಪ ವಾಸಿಗಳಾದ ಕಿರಣ್ ಕುಮಾರ್, ಪರಶುರಾಮ, ಪರ್ವತಪ್ಪ, ಸಂಜಯ್, ಕಿರಣ್, ಮಾಣಿಕೆರೆ ನಿವಾಸಿಗಳಾದ ಎಂ.ಆರ್.ಆಶೋಕ, ಎಂ.ಅರ್.ಜಗದೀಶ ಮಾಣಿಕೆರೆ, ಸಚಿನ್, ಸುರೇಶ್ ಮಾಣಿಕೆರೆ, ರಾಘವೇಂದ್ರ, ಪ್ರಭಾಕರ್ ಎಂದು ಶಂಕಿಸಲಾಗಿದ್ದು ಇವರ ಪತ್ತೆಗಾಗಿ ಅರಣ್ಯ ಇಲಾಖೆ ಬಲೆ ಬೀಸಿದೆ ಎಂದು ತಿಳಿದುಬಂದಿದೆ.

ಕಣ್ಮುಚ್ಚಿಕೊಂಡ ಇಲಾಖೆ ಸಿಬ್ಬಂದಿಗಳು ;
ಸಿರಿಗೆರೆ ಮತ್ತು ಅರಸಾಳು ವ್ಯಾಪ್ತಿಯಲ್ಲಿ ಲಕ್ಷಾಂತರ ರೂ. ಮೌಲ್ಯದ ಸಾಗುವಾನಿ ಮರಗಳನ್ನು ಎಗ್ಗಿಲ್ಲದೆ ಅಕ್ರಮವಾಗಿ ಕಡಿತಲೆ ಮಾಡಿ ಸಾಗಾಣಿಕೆ ಮಾಡಲಾಗುತ್ತಿದ್ದರೂ ಕೂಡಾ ಇಲಾಖೆಯ ಸಿಬ್ಬಂದಿ ವರ್ಗ ಇತ್ತ ಗಮನಹರಿಸದೇ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುವ ಮೂಲಕ ಈ ಪ್ರಕರಣದಲ್ಲಿ ಇಲಾಖೆಯ ಸಿಬ್ಬಂದಿಗಳ ಕೈವಾಡ ಇರಬಹುದೆಂದು ಸಂಶಯ ವ್ಯಕ್ತಪಡಿಸುತ್ತಿದ್ದಾರೆ.
ವನ ರಕ್ಷಕ ಮತ್ತು ವನಪಾಲಕರ ಕಾರ್ಯ ಏನು ?
ಪ್ರತಿನಿತ್ಯ ವನ ರಕ್ಷಕರು ಮತ್ತು ವನಪಾಲಕರು ತಮ್ಮ ವ್ಯಾಪ್ತಿಯಲ್ಲಿ ಓಡಾಡಿ ಅರಣ್ಯ ಪ್ರದೇಶದಲ್ಲಿ ಏನಾಗುತ್ತಿದೆ ಎಂಬ ಬಗ್ಗೆ ಗಸ್ತು ಮಾಡಿ ವರದಿ ನೀಡಬೇಕು ಎಂಬ ನಿಯಮವಿದ್ದರೂ ಕೂಡಾ ಲಕ್ಷಾಂತರ ರೂ. ಮೌಲ್ಯದ ಸಾಗುವಾನಿ ಮರಗಳ ಮಾರಣ ಹೋಮ ನಡೆಯುತ್ತಿದ್ದರೂ ಕೂಡಾ ಇವರ ಗಮನಕ್ಕೆ ಬಾರದಿರುವುದರ ಹಿಂದಿನ ಮರ್ಮ ಏನು ? ಕೇಂದ್ರ ಸ್ಥಾನದಲ್ಲಿ ಇಲ್ಲದೇ ಇರುವುದೇ ಈ ರೀತಿಯ ಕೃತ್ಯಕ್ಕೆ ಕಾರಣವೆನ್ನಲಾಗಿದೆ.
ಇನ್ನಾದರೂ ಸಂಬಂಧಿಸಿದ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಇತ್ತ ಗಮನಹರಿಸಿ ಅಕ್ರಮ ಅವ್ಯವಹಾರಗಳಿಗೆ ಕಡಿವಾಣ ಹಾಕುವ ಮೂಲಕ ಲಕ್ಷಾಂತರ ರೂ. ಮೌಲ್ಯದ ಸಾಗುವಾನಿ ಮರಗಳ ಕಡಿತಲೆ ನಡೆಸಿದವರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳುವರೆ ಕಾದು ನೋಡಬೇಕಾಗಿದೆ.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು
HosanagaraJune 1, 2025ಹೊಸನಗರ ; ಜೂ. 2 ಮತ್ತು 3ಕ್ಕೆ ತಾಲೂಕಿನಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮ
Adike RateJune 1, 2025Arecanut, Black Pepper Price 31 May 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?