HOSANAGARA ; ತಾಲೂಕಿನ ಹುಲಿಕಲ್ ಘಾಟ್ ರಸ್ತೆ ತಿರುವಿನಲ್ಲಿ ಸಂಚರಿಸುತ್ತಿದ್ದ ಬಸ್ ಬ್ರೇಕ್ ಫೈಲ್ ಆಗಿ ಸುಮಾರು 60 ಅಡಿ ಆಳದ ಪ್ರಪಾತಕ್ಕೆ ಉರುಳಿದೆ.
ದಾವಣಗೆರೆಯಿಂದ ಮಂಗಳೂರು ಮಧ್ಯೆ ಸಂಚರಿಸುತ್ತಿದ್ದ ಖಾಸಗಿ ಬಸ್ ಭಾನುವಾರ ರಾತ್ರಿ 1.45 ಗಂಟೆಗೆ ಘಾಟಿ ರಸ್ತೆಯ ಶಿವಮೊಗ್ಗ ಜಿಲ್ಲೆ ಗಡಿ ಭಾಗದ ತಿರುವಿನಲ್ಲಿ ಬ್ರೇಕ್ ಫೈಲ್ ಆಗಿದ್ದು ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಪ್ರಪಾತಕ್ಕೆ ಉರುಳಿದೆ.
ಬಸ್ಸಿನಲ್ಲಿ ಒಟ್ಟು 45 ಮಂದಿ ಪ್ರಯಾಣಿಕರಿದ್ದರು. ಹಲವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಡೆಗೋಡೆ ನಿರ್ಮಿಸಿ ;
‘ರಸ್ತೆಯ ಎರಡೂ ಬದಿ ಯಾವುದೇ ತಡೆಗೋಡೆ ಇಲ್ಲ. ರಸ್ತೆ ಬದಿ ಮಣ್ಣು ಹಾಕಿ ಎತ್ತರಿಸಲಾಗಿದ್ದು, ಬದಿಗೆ ಅಳವಡಿಸಿರುವ ಕಬ್ಬಿಣದ ಪಟ್ಟಿಗಳು ಮುಚ್ಚಿಹೋಗಿವೆ. ಇದರಿಂದ ಹೆಚ್ಚಿನ ಅಪಘಾತ ಸಂಭವಿಸುತ್ತಿವೆ. ತಡೆಗೋಡೆ ನಿರ್ಮಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಚಾಲಕ ಬಸವರಾಜ ಒತ್ತಾಯಿಸಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.