HOSANAGARA ; ಸವಾರನ ನಿಯಂತ್ರಣ ತಪ್ಪಿ ಬೈಕಿನಿಂದ ಬಿದ್ದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಸೊನಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಳಗಿ ಬಳಿ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಸಂಭವಿಸಿದೆ.
ಸೊನಲೆಯ ವಾಸಿ ನಾಗರಾಜ್ ಎಂಬುವರ ಪುತ್ರ ಸುಮಂತ್ (30) ಸಾವನ್ನಪ್ಪಿದ ಯುವಕ. ಸೊನಲೆಯಿಂದ ಹೊಸನಗರದ ಕಡೆಗೆ ಬರುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಧರೆಗೆ ಅಪ್ಪಳಿಸಿ ಈ ಘಟನೆ ನಡೆದಿದೆ.
ಸುಮಂತ್ ನಾಗರಾಜ್ ಅವರ ಏಕಮಾತ್ರ ಪುತ್ರನಾಗಿದ್ದು ಈತ ಅವಿವಾಹಿತನಾಗಿದ್ದ ಎಂದು ತಿಳಿದುಬಂದಿದೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.