ಕೋಣಂದೂರು ಬೃಹನ್ಮಠದಲ್ಲಿ ಮಕರ ಸಂಕ್ರಾಂತಿ ಜಾತ್ರಾ ಮಹೋತ್ಸವ, ಶಿವಲಿಂಗಶ್ರೀ ಪ್ರಶಸ್ತಿ ಪ್ರದಾನ ಧರ್ಮ ಸಮಾರಂಭ

Written by Mahesh Hindlemane

Published on:

RIPPONPETE ; ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಬೃಹನ್ಮಠದಲ್ಲಿ ಜನವರಿ 14 ರಂದು ಮಕರ ಸಂಕ್ರಾಂತಿ ಜಾತ್ರಾ ಮಹೋತ್ಸವ ಮತ್ತು ಶ್ರೀಪತಿ ಪಂಡಿತಾರಾಧ್ಯ ಶಿವಚಾರ್ಯ ಮಹಾಸ್ವಾಮೀಜಿಯವರ ಧನುರ್ಮಾಸ ಶಿವಪೂಜಾನುಷ್ಟಾನ ಮುಕ್ತಾಯ ಹಾಗೂ ಶ್ರೀಶಿವಲಿಂಗಶ್ರೀ ಪ್ರಶಸ್ತಿ ಪ್ರದಾನ ಹಾಗೂ ಧರ್ಮಜಾಗೃತಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಮಠದ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಜನವರಿ 14 ರಂದು ಮಕರ ಸಂಕ್ರಾಂತಿಯ ಅಂಗವಾಗಿ ಕೋಣಂದೂರು ಶ್ರೀಶಿವಲಿಂಗೇಶ್ವರ ಸಮುದಾಯ ಭವನದಲ್ಲಿ ಬೆಳಗ್ಗೆ 10 ಕ್ಕೆ ಧರ್ಮಸಭೆ ಈ ಸಭೆಯ ದಿವ್ಯಸಾನಿಧ್ಯವನ್ನು ಆನಂದಪುರ ಮುರುಘಾರಾಜೇಂದ್ರ ಸಂಸ್ಥಾನ ಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಗಳು ವಹಿಸಲಿದ್ದಾರೆ.

ಧರ್ಮಸಭೆಯ ಅಧ್ಯಕ್ಷತೆಯನ್ನು ವೀರಪುರ ಹಿರೇಮಠದ ಡಾ.ಮರುಳಸಿದ್ದ ಪಂಡಿತಾರಾಧ್ಯಶಿವಾಚಾರ್ಯರು ವಹಿಸುವರು.
ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದ ಬಿ.ವೈ.ರಾಘವೇಂದ್ರ ನೇರವೇರಿಸುವರು. ಶ್ರೀಶಿವಲಿಂಗೇಶ್ವರ ಪಂಚಾಂಗವನ್ನು ಶಾಸಕ ಆರಗ ಜ್ಞಾನೇಂದ್ರ ಬಿಡುಗಡೆ ಮಾಡುವರು.

ಹೊನ್ನಾಳ್ಳಿ ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು, ರೆಟ್ಟೆಹಳ್ಳಿ ಕಬ್ಬಿನಕಂತಿ ಮಠದ ಶಿವಲಿಂಗ ಶಿವಾಚಾರ್ಯ ಮಹಾಸ್ವಾಮಿಜಿ ನೇತೃತ್ವ ವಹಿಸುವರು.

ಮುಖ್ಯ ಅತಿಥಿಗಳಾಗಿ ಎಂ.ಎಲ್.ಸಿ. ಡಾ.ಧನಂಜಯ ಸರ್ಜಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಎಂ.ಎ.ಡಿ.ಬಿ. ಅಧ್ಯಕ್ಷ ಮಂಜುನಾಥಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಉದ್ಯಮಿ ಕೆ.ಆರ್.ಪ್ರಕಾಶ್, ಅಕ್ಷಯ ಸೌಹಾರ್ದ ಸಹಕಾರ ಬ್ಯಾಂಕ್ ಅಧ್ಯಕ್ಷ ದಿನೇಶ್‌ತಟ್ಟೆಕೊಪ್ಪ ಹಾಗೂ ನಾಡಿನ ಹರಗುರು ಚರಮೂರ್ತಿಗಳು ಪಾಲ್ಗೊಳ್ಳಲ್ಲಿದ್ದಾರೆ.

ಇದೇ ಸಂದರ್ಭದಲ್ಲಿ ಕೋಣಂದೂರು ಬೃಹನ್ಮಠದಿಂದ ಕೊಡ ಮಾಡುವ ಶ್ರೀಶಿವಲಿಂಗೇಶ್ವರ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಶ್ರೀಗಳು ವಿವರಿಸಿದರು.

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment