ಚಿಕ್ಕಮಗಳೂರು ; ಎರಡು ದಿನದ ಮಗುವನ್ನು ಹೆತ್ತ ತಾಯಿಯೇ ಕಾಫಿ ತೋಟದಲ್ಲಿ ಬಿಟ್ಟು ಹೋಗಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಅಲ್ಲಂಪುರ ಗ್ರಾಮದಲ್ಲಿ ನಡೆದಿದೆ.
ಚಂದ್ರಮ್ಮ ಎಂಬುವರ ಮನೆಯ ಪಕ್ಕದಲ್ಲಿರುವ ಕಾಫಿ ತೋಟದಲ್ಲಿ ಹುಟ್ಟಿದ ಎರಡೇ ದಿನಕ್ಕೆ ಪುಟ್ಟ ಕಂದಮ್ಮನನ್ನು ಹೆತ್ತ ತಾಯಿಯೇ ಬಿಟ್ಟು ಹೋಗಿದ್ದು, ಗುರುವಾರ ಬೆಳಗಿನಜಾವ 6 ಗಂಟೆಯ ಸಮಯದಲ್ಲಿ ಮಗು ಅಳುವ ಸದ್ದು ಕೇಳಿಸಿದೆ. ಗಂಟೆಗಳು ಕಳೆದರೂ ಕೂಡ ಮಗುವಿನ ಅಳು ನಿಲ್ಲದಿದ್ದಾಗ ತನ್ನ ಮಗಳನ್ನು ಕರೆದುಕೊಂಡು ಬಂದು ನೋಡಲು ಮೈ ಮೇಲೆ ಬಟ್ಟೆಯೇ ಇಲ್ಲದೆ ತೋಟದ ಒಂದು ಮೂಲೆಯಲ್ಲಿ ಅಳುತ್ತಿರುವ ಮಗು ಕಂಡು ಬಂದಿದೆ.
ಮಗುವನ್ನು ಕರೆತಂದು ತಮ್ಮ ಮನೆಯಲ್ಲಿ ಹಾಲು ಕುಡಿಸಿ ಆರೈಕೆ ಮಾಡಿದ್ದಾರೆ. ನಂತರ ಗ್ರಾಮದ ಅಂಗನವಾಡಿಗೆ ವಿಷಯ ತಿಳಿಸಿದ್ದಾರೆ. ವೈದ್ಯರೊಂದಿಗೆ ಸ್ಥಳಕ್ಕೆ ಬಂದ ಅಧಿಕಾರಿಗಳು ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಅನಾಥ ಮಗು ಪತ್ತೆಯಾಗಿದ್ದು, ಪೋಷಕರನ್ನು ಪತ್ತೆ ಹಚ್ಚಿಕೊಡುವಂತೆ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.
ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸಹಜ ಸ್ಥಿತಿಗೆ ಬಂದ ನಂತರ ದತ್ತು ಕೇಂದ್ರಕ್ಕೆ ಕರೆ ತರಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು