ರಿಪ್ಪನ್ಪೇಟೆ ; ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರಾ ಮಹೋತ್ಸವವು ಜನವರಿ 22 ರಂದು ಬುಧವಾರ ನಡೆಯಲಿದೆ.
ಅಂದು ಬೆಳಗ್ಗೆ 6 ರಿಂದ ದೇವಿಗೆ ವಿಶೇಷ ಪೂಜೆ ಮಹಾಮಂಗಳಾರತಿಯೊಂದಿಗೆ ಜಾತ್ರಾ ಮಹೋತ್ಸವ ಆರಂಭಗೊಳ್ಳುವುದು. ವರ್ಷದಲ್ಲಿ ಎರಡು ಬಾರಿ ಆಚರಿಸಲಾಗುವ ಈ ಜಾತ್ರೆಯು ಮಳೆಗಾಲದಲ್ಲಿ ಮಂಗಳವಾರ ಬೇಸಿಗೆಯಲ್ಲಿ ಬುಧವಾರದಂದು ಆಚರಿಸುವುದು ಇಲ್ಲಿನ ವಿಶೇಷ.
ರೈತರು ತಮ್ಮ ಜಮೀನಿನಲ್ಲಿ ಹಾಕಲಾದ ಬೆಳೆ ಸಂವೃದ್ದಿಯಾಗಿ ಬೆಳೆದು ಕಾಡು ಪ್ರಾಣಿ, ಪಕ್ಷಿಗಳಿಂದ ಹಾಗೂ ರೋಗ ಬಾರದಂತೆ ಬೆಳೆ ರಕ್ಷಣೆ, ಜಾನುವಾರುಗಳಿಗೂ ರೋಗ ಹರಡದಂತೆ ಮಾಡುವಂತೆ ದೇವಿಯಲ್ಲಿ ಹರಕೆ ಸಲ್ಲಿಸುತ್ತಾರೆ. ಇದರೊಂದಿಗೆ ಮದುವೆಯಾಗದ ಹೆಣ್ಣು ಮಕ್ಕಳು ವಿವಾಹ ಯೋಗ ಕರುಣಿಸಲೆಂದು, ಸಂತಾನ ಭಾಗ್ಯ ಹೀಗೆ ಯಾವುದೇ ಕಷ್ಟ ಕಾರ್ಪಣ್ಯಗಳು ಬಾರದಂತೆ ದೇವಿಯಲ್ಲಿ ಪ್ರಾರ್ಥಿಸುವುದು ಇಲ್ಲಿನ ವಿಶೇಷ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.