ಹೊಸನಗರ ; ತಾಲ್ಲೂಕಿನ ಚಕ್ರಾನಗರ ಹೊಸಬೀಡು ಗಂಗಾಧರೇಶ್ವರ ದೇವಸ್ಥಾನದ ಆವರಣದಲ್ಲಿ ಜ. 31ರ ಶುಕ್ರವಾರ ಷಡಾಧಾರ (ನಿಧಿಕುಂಭ ಸ್ಥಾಪನೆ) ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಗಂಗಾಧರೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಉದಯ ಕೊಠಾರಿ ತಿಳಿಸಿದ್ದಾರೆ.
ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕಾರ್ಯಕ್ರಮವು ಜ. 31ರ ಶುಕ್ರವಾರ ಬೆಳಿಗ್ಗೆ ಕ್ಷೇತ್ರ ಪಾಲನಹಳ್ಳಿ ಮಠದ ಪೀಠಾಧ್ಯಕ್ಷರಾದ ಡಾ|| ಶ್ರೀ ಸಿದ್ಧರಾಜು ಸ್ವಾಮಿಗಳವರ ಸಾರಥ್ಯದಲ್ಲಿ ಎಲ್ಲ ಕಾರ್ಯಕ್ರಮಗಳು ನಡೆಯಲಿದ್ದು ಬೆಳಿಗ್ಗೆ 9 ಗಂಟೆಯಿಂದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು 12 ಗಂಟೆಗೆ ಮಹಾಮಂಗಳಾರತಿ 1 ಗಂಟೆಗೆ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದ್ದು ದೇವಸ್ಥಾನದ ಭಕ್ತಾರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಕೇಳಿಕೊಂಡರು.
ಸಮಿತಿಯ ಗೌರವಾಧ್ಯಕ್ಷ ಟಾಕಪ್ಪ ಗೌಡ ಮಾತನಾಡಿ, ದೇವಸ್ಥಾನದ ಪೂರ್ಣ ನಿರ್ಮಾಣಕ್ಕೆ ಸುಮಾರು 2.50 ಕೋಟಿ ರೂ. ಬೇಕಾಗಿದ್ದು ಈಗಾಗಲೇ ಸಾಕಷ್ಟು ಭಕ್ತಾಧಿಗಳನ್ನು ಸಂಪರ್ಕಿಸಲಾಗಿದ್ದು ಹಣ ನೀಡಲು ಕೆಲವು ದಾನಿಗಳು ಮುಂದೆ ಬಂದಿದ್ದಾರೆ. ದೇವಸ್ಥಾನದ ಭಕ್ತಾಧಿಗಳು ಅನೇಕ ಊರುಗಳಲ್ಲಿ ವಾಸವಾಗಿದ್ದು ಅವರನ್ನು ನೇರವಾಗಿ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ ಒಂದು ಸುಂದರವಾದ ದೇವಸ್ಥಾನ ನಿರ್ಮಿಸಲು ಭಕ್ತಾದಿಗಳು ನಮೊಂದಿಗೆ ಸಹಕರಿಸಬೇಕೆಂದು ಈ ಮೂಲಕ ಕೇಳಿಕೊಂಡರು.

ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಉಪಾಧ್ಯಕ್ಷ ಶೇಷಪ್ಪ ಮತ್ತು ಹೂವಪ್ಪ ಗೌಡ ಮತ್ತು ಇತರರು, ಪ್ರಧಾನ ಕಾರ್ಯದರ್ಶಿಯಾದ ಕಿರಣ್ ನಾಯ್ಕ್ ಹೊಸಬೀಡು, ಸಹ ಕಾರ್ಯದಶಿಯಾದ ಪ್ರವೀಣ್ ನಾಯ್ಕ್ ಸಂಘಟನಾ ಕಾರ್ಯದರ್ಶಿ ಸುರೇಶ್ ಗೌಡ, ರವಿ ಕೊಠಾರಿ, ಖಜಾಂಚಿ ಎಸ್.ಎಲ್ ನಾಗೇಶ್ಭಟ್, ಸಹ ಖಜಾಂಚಿ ರಾಜು ಹೆಚ್.ಆರ್, ಸಲಹೆಗಾರರಾದ ಹೆಚ್.ಪಿ ತಿಮ್ಮಪ್ಪ ಹಾಗೂ ಆನಂದ ಮೊಗವೀರ ದೇವಸ್ಥಾನ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.