ತರೀಕೆರೆ ; ತಂದೆಯ ಸಾವಾದರೂ ಮಗಳಿಗೆ ಈ ವಿಚಾರ ತಿಳಿಯದಂತೆ ಮುಚ್ಚಿಟ್ಟು ಸೂತಕದ ನಡುವೆಯೇ ಕುಟುಂಬಸ್ಥರು ಮದುವೆಯನ್ನು ನೆರವೇರಿಸಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರ ಪಟ್ಟಣದಲ್ಲಿ ನಡೆದಿದೆ.
ಹೌದು, 45 ವರ್ಷದ ಚಂದ್ರು ಅವರು ತಮ್ಮ ಮಗಳ ಮದುವೆ ಹಿನ್ನೆಲೆ ಹಿಂದಿನ ದಿನ ಉತ್ಸಾಹದಿಂದ ಓಡಾಡಿಕೊಂಡಿದ್ದರು. ನಿನ್ನೆ ಬೆಳಗ್ಗೆ ತರೀಕೆರೆ ತಾಲೂಕಿನ ಹುಲಿತಿಮ್ಮಾಪುರಕ್ಕೆ ಆಮಂತ್ರಣ ಪತ್ರಿಕೆಯನ್ನು ಕೊಡಲು ಹೋದಾಗ ಅಲ್ಲಿ ಭೀಕರ ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ. ಆದರೆ ತಂದೆ ಸಾವನ್ನಪ್ಪಿದ್ದಾರೆ ಎಂದು ಮಗಳು ತಿಳಿದರೆ, ಎಲ್ಲಿ ಮದುವೆಯನ್ನು ನಿಲ್ಲಿಸುತ್ತಾಳೊ ಎಂಬ ಭಯದಿಂದ ಕುಟುಂಬ್ಥರು ಈ ವಿಚಾರವನ್ನು ಮುಚ್ಚಿಟ್ಟು ಮದುವೆ ಮಾಡಿಸಿದ್ದಾರೆ. ಅಪ್ಪ ಎಲ್ಲಿ ಎಂದು ಕೇಳಿದರೆ, ಅವರಿಗೆ ಮದುವೆಗೆ ಓಡಾಡಿ ಸುಸ್ತಾಗಿದೆ, ಆಸ್ಪತ್ರೆಯಲ್ಲಿದ್ದಾರೆ ಎಂದು ಹೇಳಿ ವಿವಾಹವನ್ನು ನೆರವೇರಿಸಿದ್ದಾರೆ.
ಎಲ್ಲಾ ಮದುವೆ ಶಾಸ್ತ್ರ ಮುಗಿಯುವ ತನಕ ಆಸ್ಪತ್ರೆಯಲ್ಲೇ ಇಡಲಾಗಿದ್ದ ಚಂದ್ರು ಮೃತದೇಹವನ್ನು ಮನೆಗೆ ರವಾನಿಸಿ ಬಳಿಕ ಸಾವಿನ ಸುದ್ದಿಯನ್ನು ತಿಳಿಸಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆಯೇ ನವ ಜೋಡಿ ಹಾಗೂ ಸಂಬಂಧಿಕರು ಮದುವೆ ಮಂಟಪದಿಂದ ಮನೆಗೆ ಓಡೋಡಿ ಹೋಗಿದ್ದಾರೆ. ಮದುವೆ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದ್ದು, ಪತ್ನಿ-ಮಗಳ ಆಕ್ರಂದನ ಮುಗಿಲು ಮುಟ್ಟಿದೆ.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು