ಶಿವಮೊಗ್ಗ ; ಕಳೆದ ಸಾಲಿನಲ್ಲಿ ಮಂಡಳಿ ವತಿಯಿಂದ ಮಂಜೂರಾಗಿರುವ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕಿದೆ ಎಂದು ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಅಧ್ಯಕ್ಷರಾದ ಆರ್.ಎಂ.ಮಂಜುನಾಥ ಗೌಡ ಹೇಳಿದರು.
ಗುರುವಾರ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಕಚೇರಿಯಲ್ಲಿ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿಯ 2025-26ನೇ ಸಾಲಿನ ಹೊಸ ದಿನಚರಿ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಕಳೆದ ಸಾಲಿನಲ್ಲಿ ಮಂಜೂರಾದ 954 ಕಾಮಗಾರಿಗಳ ಪೈಕಿ 335 ಕಾಮಗಾರಿಗಳು ಪೂರ್ಣಗೊಂಡಿವೆ. ಪೂರ್ಣಗೊಂಡ ಕೆಲವು ಕಾಮಗಾರಿಗಳಿಗೆ ಪಾವತಿಯೂ ಆಗಿದೆ. 282 ಕಾಮಗಾರಿಗಳಿಗೆ ಅನುಮೋದನೆ ನೀಡಿ ಏಜೆನ್ಸಿ ನಿಗದಿಗೊಳಿಸಲಾಗಿದೆ. ಮಾರ್ಚ್ ಒಳಗೆ ಬಾಕಿ ಉಳಿದ ಕಾಮಗಾರಿಗಳು ಪೂರ್ಣಗೊಳ್ಳಬೇಕಿದೆ. ಮಂಡಳಿಯಲ್ಲಿ ಸುಮಾರು ರೂ. 60 ರಿಂದ 70 ಕೋಟಿ ಅನುದಾನವೂ ಇದೆ. ಕಾಮಗಾರಿಗಳು ಶೀಘ್ರವಾಗಿ ಪೂರ್ಣಗೊಳ್ಳಬೇಕಿದೆ. ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವ ಸಂಬಂಧ ಶಾಸಕರಿಗೆ ಪತ್ರ ಬರೆಯಲಾಗಿದೆ ಎಂದರು.

ಜಿಲ್ಲೆಯಲ್ಲಿ ಮಂಡಳಿ ವತಿಯಿಂದ ಕಾಲುಸಂಕಗಳು, ಪೆವಿಲಿಯನ್, ಕುಂದಾದ್ರಿ ಬೆಟ್ಟದ ಬಳಿ, ಹುಂಚದಲ್ಲಿ ರಸ್ತೆ ಕಾಮಗಾರಿಗಳು ಸೇರಿದಂತೆ ಸುಮಾರು 1200 ಕಾಮಗಾರಿಗಳು ಪ್ರಗತಿಯಲ್ಲಿವೆ. ಜಿಲ್ಲೆಯ ಪ್ರವಾಸೋದ್ಯಮದ ದೃಷ್ಟಿಯಿಂದ ಕಾಲುಸಂಕ, ಸೇತುವೆ ಮತ್ತು ಇತರೆ ಕಾಮಗಾರಿಗಳಿಗೆ ರೂ.200 ಕೋಟಿ ನಬಾರ್ಡ್ ಅನುದಾನಕ್ಕೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುದಾನ ಮಂಜೂರಾದಲ್ಲಿ ಮುಂದಿನ ವರ್ಷದಿಂದ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. ಹಾಗೂ ಈ ಬಾರಿ ಪ್ರತಿ ಶಾಸಕರಿಗೆ ಮಂಡಳಿಯಿಂದ ತಲಾ ರೂ.1 ಕೋಟಿ ಅನುದಾನ ನೀಡುವಂತೆ ಕೋರಲಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ಎಸ್.ಕೆ.ಮರಿಯಪ್ಪ, ಮಂಡಳಿ ಕಾರ್ಯದರ್ಶಿಗಳಾದ ಮೊಹಮ್ಮದ್ ನಜೀರ್, ಅಧೀನ ಕಾರ್ಯದರ್ಶಿ ಹನುಮಾನಾಯ್ಕ್, ಉಪ ನಿರ್ದೇಶಕ ಶಿವಾನಂದ ಕುದ್ರಿ, ಕಾರ್ಯಪಾಲಕ ಅಭಿಯಂತರ ವಿಜಯಕುಮಾರ್ ಹಾಜರಿದ್ದರು.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 4, 2025ಅಮ್ಮನಘಟ್ಟ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ; ದೇವಸ್ಥಾನದಲ್ಲಿ ಜಾತಿ ಭೇದ ಭಾವನೆ ಬೇಡ
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ