ಹೊಸನಗರ ; ಪಟ್ಟಣದ ಆರಕ್ಷಕ ಠಾಣೆಯಲ್ಲಿ ಗುರುವಾರ ಹುತಾತ್ಮರ ದಿನದ ಆಚರಣೆಯನ್ನು ಎಎಸ್ಐ ಸತೀಶ್ ರಾಜ್ ನೇತೃತ್ವದಲ್ಲಿ ಸಿಬ್ಬಂದಿ ವರ್ಗದವರು ಹುತಾತ್ಮರಗೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.
ಎಎಸ್ಐ ನಿರಂಜನ್, ಎಎಸ್ಐ ರತ್ನಾಕರ್ ಹಾಗೂ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ವಿಶ್ವಕ್ಕೆ ಸತ್ಯ ಮತ್ತು ಅಹಿಂಸಾ ಮಾರ್ಗ ತೋರಿದ ಹಾಗೂ ಭಾರತಕ್ಕೆ ತಮ್ಮ ಪ್ರಾಣ ತೆತ್ತು ಸ್ವಾತಂತ್ರ್ಯ ತಂದುಕೊಟ್ಟ ಮಹಾನ್ ಚೇತನ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಕನಸನ್ನು ನನಸಾಗಿಸಲು ಎಲ್ಲರೂ ಪಣ ತೊಡಬೇಕೆಂದರು.

ಹುತಾತ್ಮರ ಮೇಲೆ ಕೇವಲ ಗಾಂಧೀಜಿಯವರಷ್ಟೇ ಅಲ್ಲ ರಾಷ್ಟ್ರಕ್ಕಾಗಿ ಮಡಿದ ಎಲ್ಲ ದಿವ್ಯತ್ಮರ ಸೇವೆಯನ್ನು ಮಹಾತ್ಮ ಗಾಂಧೀಜಿ ಮಡಿದ ಜನವರಿ 30ರಂದು ಸ್ಮರಿಸುವ ದಿನವಾಗಿದೆ ಎಂದರು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.