ಶಿವಮೊಗ್ಗದಲ್ಲಿ ಉಪವಾಸ ಸತ್ಯಾಗ್ರಹಕ್ಕೆ ಕುಳಿತ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ; ಯಾಕೆ ಗೊತ್ತಾ ?
ಶಿವಮೊಗ್ಗ : ಬಿಜೆಪಿ ನೀಡಿದ ಪ್ರಣಾಳಿಕೆ ಈಡೇರಿಸದ ಹಿನ್ನೆಲೆಯಲ್ಲಿ ಶಿವಮೊಗ್ಗದ ಮಹಾತ್ಮ ಗಾಂಧಿ ಪಾರ್ಕ್ನಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಉಪವಾಸ ಸತ್ಯಾಗ್ರಹಕ್ಕೆ ಕುಳಿತ್ತಿದ್ದಾರೆ.
ಗಾಂಧಿ ಪಾರ್ಕ್ನ ಗಾಂಧಿ ಪ್ರತಿಮೆ ಮುಂಭಾಗ ಉಪವಾಸ ಧರಣಿ ಕುಳಿತಿರುವ ಅವರು, ಬಿಜೆಪಿ ಕೇಂದ್ರ ಸರ್ಕಾರ ಬರುವ ಮುನ್ನ ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ಐದು ವರ್ಷಗಳೇ ಕಳೆದರು ಯಾವುದೇ ಆಶ್ವಾಸನೆ ಈಡೇರಿಸಿಲ್ಲ. ರೈತರ ಸಾಲ ಮನ್ನಾ ಹಾಗೂ ಮೂರು ಗ್ರಾಂ ಬಂಗಾರ ನೀಡಿವುದಾಗಿ ಹೇಳಿತ್ತು. ಆದರೆ ಯಾವುದನ್ನು ಈಡೇರಿಸಿಲ್ಲ. ಈಗ ನಮ್ಮ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಅವರು ಅದನ್ನು ಪಶ್ಚಾತ್ತಾಪ ದಿನ ಎಂದು ಆಚರಣೆ ಮಾಡಿ. ನಮ್ಮ ಗ್ಯಾರಂಟಿಗಳನ್ನು ಐದು ತಿಂಗಳಲ್ಲಿ ಈಡೇರಿಸುತ್ತೇವೆ ಎಂದು ಬಿಜೆಪಿ ವಿರುದ್ಧ ಕಿಮ್ಮನೆ ರತ್ನಕರ್ ಕಿಡಿಕಾರಿದರು.