ಶಿವಮೊಗ್ಗ ; ನಗರದ ಬಿ.ಹೆಚ್. ರಸ್ತೆಯ ಮೈಲಾರೇಶ್ವರ ದೇವಾಲಯದ ಬಳಿ ನಗರ ಸಾರಿಗೆ ಬಸ್ನಿಂದ ಬಿದ್ದು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದು, ಗುರುಪುರದಿಂದ ಆತ ಸಿಟಿಯಲ್ಲಿನ ಕಾಲೇಜಿಗೆ ಬರುವಾಗ ಈ ಘಟನೆ ಸಂಭವಿಸಿದೆ.
ಪ್ರಥಮ ಪಿಯು ಕಾಮರ್ಸ್ ವಿದ್ಯಾರ್ಥಿ ಯಶವಂತ್ (17) ಮೃತ ವಿದ್ಯಾರ್ಥಿ. ಈತ ನಗರ ಸಾರಿಗೆ ಬಸ್ನಲ್ಲಿ ಪುಟ್ ಬೋರ್ಡ್ ಮೇಲೆ ನಿಂತು ಪ್ರಯಾಣಿಸುತ್ತಿದ್ದ. ಸಿಟಿ ಬಸ್ ಮೈಲಾರೇಶ್ವರ ದೇವಾಲಯದ ಬಳಿ ಬರುವಾಗ ಚಾಲಕ ಬ್ರೇಕ್ ಹಾಕಿದ್ದಾನೆ. ಇದಕ್ಕಿದ್ದಂತೆ ಬ್ರೇಕ್ ಬಿದ್ದ ಹಿನ್ನೆಲೆಯಲ್ಲಿ ಪುಟ್ ಬೋರ್ಡ್ನ ಮೇಲಿದ್ದ ವಿದ್ಯಾರ್ಥಿ ಆಯತಪ್ಪಿ ಬಸ್ನಿಂದ ಕೆಳಕ್ಕೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೂರ್ವ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.