ಭದ್ರಾವತಿ ; ಸತ್ತು ಬದುಕಿ ಅಚ್ಚರಿ ಮೂಡಿಸಿದ್ದ ಭದ್ರಾವತಿಯ ಮಹಿಳೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೀನಾಕ್ಷಿ (52) ಮೃತ ಮಹಿಳೆ. ಅವರು ಪತಿ ಗುತ್ತಿಗೆದಾರ ಸುಬ್ರಮಣಿ ಮತ್ತು ಮೂವರು ಪುತ್ರರು ಸೇರಿ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮೀನಾಕ್ಷಿ ನಿಧನರಾಗಿದ್ದಾರೆ ಎಂದು ವೈದ್ಯರು ಹೇಳಿದ್ದರಿಂದ ಮಂಗಳವಾರ ಬೆಳಗ್ಗೆ ಮೃತ ದೇಹವನ್ನು ಮನೆಗೆ ತಂದು ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು.
ಬಂಧು-ಬಾಂಧವರು ಅಂತಿಮ ದರ್ಶನಕ್ಕೆ ಆಗಮಿಸಿದ್ದರು ಈ ವೇಳೆ ಕಣ್ಣು ಬಿಟ್ಟು ನೋಡಿ ಉಸಿರಾಡಿದ ಮೀನಾಕ್ಷಿ ಅವರನ್ನು ಕೂಡಲೇ ಕುಟುಂಬದವರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೀನಾಕ್ಷಿ ಮೃತಪಟ್ಟಿದ್ದಾರೆ. ಶುಕ್ರವಾರ ಭದ್ರಾವತಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.