ಶಿವಮೊಗ್ಗ ; ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಮತ್ತು ಆದ್ಯತಾ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮುಖಾಂತರ ಹಣ ವರ್ಗಾಯಿಸಲಾಗುತ್ತಿದ್ದು, ಫೆಬ್ರವರಿ-2025 ರಿಂದ ಜಾರಿಗೆ ಬರುವಂತೆ 5 ಕೆ.ಜಿ. ಅಕ್ಕಿಯನ್ನು ಮಾರ್ಚ್-2025ರ ಮಾಹೆಯ ಪಡಿತರ ವಿತರಣೆಯೊಂದಿಗೆ ಸೇರಿಸಿ ವಿತರಿಸಲು ಸರ್ಕಾರವು ಆದೇಶಿಸಿದೆ.
ಅಂತ್ಯೋದಯ ಪಡಿತರ ಚೀಟಿಗೆ ಕೇಂದ್ರದಿಂದ 3 ಸದಸ್ಯರವರೆಗಿನ ಪಡಿತರ ಚೀಟಿಗೆ 35 ಕೆ.ಜಿ. ಹಾಗೂ ರಾಜ್ಯದಿಂದ 4 ಸದಸ್ಯ ಮೇಲ್ಪಟ್ಟು ಒಬ್ಬರಿಗೆ 10 ಕೆ.ಜಿ.ಯಂತೆ ಹಾಗೂ ಆದ್ಯತಾ ಪಡಿತರ ಚೀಟಿಗೆ ಪ್ರತಿ ಸದಸ್ಯರಿಗೆ ಕೇಂದ್ರದಿಂದ ತಲಾ 5 ಕೆ.ಜಿ. ಹಾಗೂ ರಾಜ್ಯದಿಂದ ಪ್ರತಿ ಸದಸ್ಯರಿಗೆ ತಲಾ 10 ಕೆ.ಜಿ.ಯಂತೆ ಅಕ್ಕಿಯನ್ನು ಮಾರ್ಚ್-2025ರ ಮಾಹೆಗೆ ಮಾತ್ರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.