ಅಮ್ಮನಘಟ್ಟ ದೇಣಿಗೆ-ಲೆಕ್ಕಪತ್ರ ಹಸ್ತಾಂತರ

Written by Mahesh Hindlemane

Published on:

ಹೊಸನಗರ ; ತಾಲೂಕಿನ ಶಕ್ತಿದೇವತೆ ಎಂದೇ ಭಕ್ತಾದಿಗಳಿಂದ ಆರಾಧಿಸಲ್ಪಡುವ ಕೋಡೂರು ಸಮೀಪದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ನೂತನ ಶಿಲಾಮಯ ದೇವಸ್ಥಾನವು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು, ದೇವಸ್ಥಾನ ಅಭಿವೃದ್ಧಿ ಸಮಿತಿಯ ಹಿಂದಿನ ಅವಧಿಯ ಕಾರ‍್ಯಾಧ್ಯಕ್ಷ ಕಲಗೋಡು ರತ್ನಾಕರ ಅವರು ತಮ್ಮ ಅವಧಿಯಲ್ಲಿ ಭಕ್ತಾದಿಗಳಿಂದ ಸಂಗ್ರಹವಾಗಿದ್ದ ದೇಣಿಗೆ ಹಣ ಹಾಗೂ ಲೆಕ್ಕಪತ್ರಗಳನ್ನು ಮಾಜಿ ಶಾಸಕ ಡಾ.ಜಿ.ಡಿ.ನಾರಾಯಣಪ್ಪ ಸಮ್ಮುಖದಲ್ಲಿ ಮಂಗಳವಾರ ನೂತನ ಆಡಳಿತ ಸಮಿತಿಗೆ ಹಸ್ತಾಂತರಿಸಿದರು.

WhatsApp Group Join Now
Telegram Group Join Now
Instagram Group Join Now

ಈ ಸಂದರ್ಭ ಪ್ರಮುಖರಾದ ಬಂಡಿ ರಾಮಚಂದ್ರ, ಬಿ.ಜಿ.ಚಂದ್ರಮೌಳಿ, ತಾರಕೇಶ್ವರ, ಎಚ್.ಬಿ.ಚಿದಂಬರ, ಎರಗಿ ಉಮೇಶ, ರಾಮಚಂದ್ರಪ್ಪ, ಕೃಪಾನಂದರಾವ್, ಸಂತೋಷ್, ವೇದಾಂತಪ್ಪಗೌಡ ಹಾಗೂ ವ್ಯವಸ್ಥಾಪನಾ ಸಮಿತಿಯ ಪುಟ್ಟಪ್ಪ, ಸುಧೀರ ಭಟ್, ಹರೀಶ್, ವಿಜೇಂದ್ರರಾವ್, ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment