ಹೊಸನಗರ ; ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿಯ ಅಧ್ಯಕ್ಷ ಪ್ರವೀಣ್ ಜಿ.ಎನ್ ಬಿಜೆಪಿ ಬೂತ್ ಸಮಿತಿ ಮತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಪ್ರವಿಣ್ ಜಿ.ಎನ್ರವರು ತಮ್ಮ ರಾಜೀನಾಮೆ ಪತ್ರವನ್ನು ಹೊಸನಗರ ತಾಲ್ಲೂಕು ಬಿಜೆಪಿ ಕಛೇರಿಗೆ ತಲುಪಿಸಿದ್ದು ಅದರಲ್ಲಿ, 10 ವರ್ಷಗಳಿಂದ ಎಂ ಗುಡ್ಡೆಕೊಪ್ಪ ಗ್ರಾಮದ ಬೂತ್ ಸಂಖ್ಯಾ 251 ಬೂತ್ ಅಧ್ಯಕ್ಷನಾಗಿದ್ದು ನಮ್ಮ ಬಿಜೆಪಿ ಸರ್ಕಾರ ಇದ್ದಾಗಲೇ ನಮ್ಮ ಜಿಲ್ಲೆಯವರೇ ಆದಾ ಆರಗ ಜ್ಞಾನೇಂದ್ರರವರು ಗೃಹಮಂತ್ರಿಯಾಗಿದ್ದರೂ ನನ್ನ ಮೇಲೆ ಒಂದೇ ಒಂದು ದೂರು ಇಲ್ಲದಿದ್ದರೂ ನನಗೆ ರೌಡಿಶೀಟ್ ಹಾಕಿದ್ದು ಮತ್ತು ಬಿಜೆಪಿ ಹೊಸನಗರ ಮಂಡಲದ ಪ್ರಧಾನ ಕಾರ್ಯದರ್ಶಿಯವರು ಮತ್ತು ಕೆಲವು ಸದಸ್ಯರು ನನ್ನ ಮೇಲೆ ಸುಳ್ಳು ಆಪಾದನೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ನನ್ನ ವಿರುದ್ಧ ಪೋಸ್ಟರ್ ಹಾಕಿದ್ದು ಇದನ್ನೆಲ್ಲ ಪಕ್ಷದ ತಾಲ್ಲೂಕು ಅಧ್ಯಕ್ಷರ ಹಾಗೂ ಮುಖಂಡರ ಗಮನಕ್ಕೆ ಹಲವು ಬಾರಿ ತಂದರೂ ನಿರ್ಲಕ್ಷ್ಯ ತೋರಿರುವುದರಿಂದ ನಾನು ಬೂತ್ ಅಧ್ಯಕ್ಷ ಸ್ಥಾನಕ್ಕೆ ಮತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.